ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm