ಬ್ರೇಕಿಂಗ್ ನ್ಯೂಸ್
07-11-25 08:05 pm HK News Desk ಕ್ರೈಂ
ಕಲಬುರಗಿ, ನ.7 : ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ.. ಯಾರಿಗೂ ಗೊತ್ತಾಗದಂತೆ ಡಬಲ್ ಪಾರ್ಟ್ ಮಾಡುತ್ತಿದ್ದ ಮನೆಗಳ್ಳನನ್ನು ಕಲಬುರಗಿ ನಗರದ ವಿವಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಜಿಲಾನಾಬಾದ್ ಕಾಲೋನಿ ನಿವಾಸಿ ಮಹ್ಮದ್ ಆರೀಫ್ ಅಲಿ(50) ಎನ್ನುವಾತನೇ ಬಂಧಿತ ಮನೆಗಳ್ಳ.
ಕಲಬುರಗಿ ನಗರದಲ್ಲಿ ಮಸೀದಿಯೊಂದರಲ್ಲಿ ಅರೆಬಿಕ್ ಶಿಕ್ಷಕ (ಕುರಾನ್ ಬೋಧಕ) ನಾಗಿ ಆರಿಫ್ ಕೆಲಸ ಮಾಡುತ್ತಿದ್ದ. ಹಗಲಲ್ಲಿ ಕುರಾನ್ ಬೋಧಕ, ರಾತ್ರಿಯಾಗುತ್ತಿದ್ದಂತೆ ಮನೆ ಕಳ್ಳನಾಗುತ್ತಿದ್ದ. ಮಧ್ಯಾಹ್ನ ಮತ್ತು ಸಂಜೆ ಕೆಲಸದ ಬಿಡುವಿನ ವೇಳೆ ಬಡಾವಣೆ ಸುತ್ತಾಡಿ, ಬೀಗ ಹಾಕಿರುವ ಮನೆಗಳನ್ನು ಗುರುತಿಸುತ್ತಿದ್ದ. ನಸುಕಿನ 3 ಗಂಟೆ ಸುಮಾರಿಗೆ ಎಲ್ಲರೂ ಗಾಢ ನಿದ್ರೆಯಲ್ಲಿರುವಾಗ ಬೀಗ ಹಾಕಿದ ಮನೆಗಳಿಗೆ ಹೋಗಿ ರಾಡ್ ನಿಂದ ಬೀಗ ಮುರಿದು ಮನೆ ದೋಚುತ್ತಿದ್ದ.
ಕಳ್ಳತನ ಮಾಡಿದ್ದ 13.41 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಮ್ ಚಿನ್ನದ ಆಭರಣಗಳು, 16 ಸಾವಿರ ರೂಪಾಯಿ ಮೌಲ್ಯದ 200 ಗ್ರಾಮ ಬೆಳ್ಳಿ, 25 ಸಾವಿರ ರೂಪಾಯಿ ಮೌಲ್ಯದ ಒಂದು ಬೈಕನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸಿಕ್ಕಿಬಿದ್ದಿದ್ದೇ ರೋಚಕ
ಕಲಬುರಗಿಯ ವಿವಿ ಠಾಣಾ ವ್ಯಾಪ್ತಿಯ ಕೆಲವು ಬಡಾವಣೆಗಳಲ್ಲಿ ಇತ್ತೀಚಿಗೆ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಕಳವು ಪ್ರಕರಣಗಳ ತನಿಖೆಗಿಳಿದ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹಗಲು ಮತ್ತು ರಾತ್ರಿ ಹೊತ್ತಲ್ಲಿ ಬಡಾವಣೆ ಒಳಗಡೆ ಆರೀಫ್ ಅಲಿ ಬೈಕ್ ಮೇಲೆ ಸಂಚರಿಸುವ ಸಿಸಿ ಟಿವಿ ದೃಶ್ಯಗಳ ನೋಡಿ ಅನುಮಾನ ಬಂದಿತ್ತು. ನಂತರ ಈತನ ಚಲನ ವಲನಗಳ ಮೇಲೆ ಪೊಲೀಸರು ತೀವ್ರ ನಿಗಾ ಇಟ್ಟಿದ್ದರು. ಅನುಮಾನ ದೃಢವಾಗುತ್ತಿದ್ದಂತೆ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು ಸತ್ಯ ಒಪ್ಪಿಕೊಂಡಿದ್ದಾನೆ.
ಇತ್ತಿಚಿಗೆ ವಿವಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳ್ಳತನ ಕೃತ್ಯ ಮಾಡಿದ್ದು ತಾನೇ ಎಂದು ಆರಿಫ್ ಆಲಿ ಒಪ್ಪಿಕೊಂಡಿದ್ದಾನೆ. ಮಸೀದಿಯಲ್ಲಿ ಕುರಾನ್ ಬೋಧನೆಯಿಂದ 12 ಸಾವಿರ ಸಂಬಳ ಬರುತ್ತಿದ್ದು ಅದು ಜೀವನ ನಿರ್ವಹಣೆಗೆ ಸಾಲದ್ದಕ್ಕೆ ಈ ಕೆಲಸಕ್ಕೆ ಇಳಿದಿದ್ದಾಗಿ ಹೇಳಿಕೊಂಡಿದ್ದಾನೆ.
In a shocking revelation, Kalaburagi city police arrested a Quran teacher who turned into a house burglar by night, leading a double life for months without raising suspicion. The accused, Mohammed Arif Ali (50), a resident of Zilanabad Colony, worked as an Arabic instructor at a local mosque during the day and carried out house thefts at night.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm