ಬ್ರೇಕಿಂಗ್ ನ್ಯೂಸ್
08-11-25 04:08 pm Mangaluru Staff ಕ್ರೈಂ
ಬಂಟ್ವಾಳ, ನ.7: ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.
ಅಲ್ಲದೆ ನಾನಾ ಮೊಬೈಲ್ ನಂಬರ್ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ತಾನು ಜಾಗ ಮಾರಿ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟಿದ್ದ ಹಣವನ್ನು ಹಿಂಪಡೆದು ಸೆ.29ರಿಂದ ಅ.10ರ ವರೆಗೆ ಅಪರಿಚಿತ ವ್ಯಕ್ತಿಗಳು ಸೂಚಿಸಿದ ಹಲವು ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.16 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದ್ದು, ಈ ಬಗ್ಗೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.
A woman from Bantwal has reportedly fallen victim to a massive online scam in which fraudsters posing as officials threatened her with a fake “digital arrest,” extorting a total of ₹1.16 crore. The case has been registered at the Cyber Economic and Narcotic (CEN) Police Station in Mangaluru.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm