ಬ್ರೇಕಿಂಗ್ ನ್ಯೂಸ್
08-11-25 04:08 pm Mangaluru Staff ಕ್ರೈಂ
ಬಂಟ್ವಾಳ, ನ.7: ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.
ಅಲ್ಲದೆ ನಾನಾ ಮೊಬೈಲ್ ನಂಬರ್ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ತಾನು ಜಾಗ ಮಾರಿ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟಿದ್ದ ಹಣವನ್ನು ಹಿಂಪಡೆದು ಸೆ.29ರಿಂದ ಅ.10ರ ವರೆಗೆ ಅಪರಿಚಿತ ವ್ಯಕ್ತಿಗಳು ಸೂಚಿಸಿದ ಹಲವು ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.16 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದ್ದು, ಈ ಬಗ್ಗೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.
A woman from Bantwal has reportedly fallen victim to a massive online scam in which fraudsters posing as officials threatened her with a fake “digital arrest,” extorting a total of ₹1.16 crore. The case has been registered at the Cyber Economic and Narcotic (CEN) Police Station in Mangaluru.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm