ಬ್ರೇಕಿಂಗ್ ನ್ಯೂಸ್
09-11-25 03:50 pm Mangalore Correspondent ಕ್ರೈಂ
ಮಂಗಳೂರು, ನ.9 : ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಜೆಪ್ಪಿನಮೊಗರು ನಿವಾಸಿ ರೋಷನ್ ಸಲ್ದಾನ ಎಂಬಾತನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ ಒಟ್ಟು 2.85 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ರೋಷನ್ ಸಲ್ದಾನ, ಪತ್ನಿ ಡ್ಯಾಫ್ಟಿ ನೀತು ಡಿಸೋಜ ಮತ್ತು ಇತರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳ ಆಧಾರದ ಮೇಲೆ ಇಡಿ ತನಿಖೆ ಪ್ರಾರಂಭಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 (ಪಿಎಂಎಲ್ಇ) ಅಡಿಯಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿಯ ಪ್ರಕಟಣೆ ತಿಳಿಸಿದೆ.
ಪಿಎಂಎಲ್ಇ ಸೆಕ್ಷನ್ 17ರ ಅಡಿಯಲ್ಲಿ ನಡೆಸಿದ ಶೋಧ ಕಾರ್ಯ ಮತ್ತು ನಂತರ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು, 2024 ಅಕ್ಟೋಬರ್ನಿಂದ 2025 ಜುಲೈ ನಡುವೆ ವಂಚನೆ ನಡೆಸಿರುವುದು ಪತ್ತೆಯಾಗಿದೆ. ರಾಜ್ಯ ಮತ್ತು ಹೊರ ರಾಜ್ಯದ ಹಲವು ಉದ್ಯಮಿಗಳಿಂದ ಸ್ಟ್ಯಾಂಪ್ ಡ್ಯೂಟಿ ನೆಪದಲ್ಲಿ ನಕಲಿ ಕಂಪನಿ ಹೆಸರಲ್ಲಿ 49 ಕೋಟಿ ರೂ. ಸಂಗ್ರಹಿಸಿದ್ದು, ಅವರಿಗೆ ಹೆಚ್ಚಿನ ಮೊತ್ತದ ಸಾಲ ಒದಗಿಸುವ ಭರವಸೆ ನೀಡಿದ್ದ. ಹೀಗೆ ಸಂಗ್ರಹಿಸಿದ ಹಣವನ್ನು ಆರೋಪಿಗಳು ತಮ್ಮ ವೈಯಕ್ತಿಕ ಉದ್ದೇಶ, ವ್ಯವಹಾರಕ್ಕೆ ಬಳಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆಗಸ್ಟ್ನಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಇಡಿ ಅಧಿಕಾರಿಗಳು, ಆರೋಪಿಗಳ ಬ್ಯಾಂಕ್ ಖಾತೆ, ಮೀನುಗಾರಿಕಾ ಬೋಟ್ ಮತ್ತು ಅವುಗಳ ಎಂಜಿನ್ಗಳ ರೂಪದಲ್ಲಿ ಅಂದಾಜು 9.5 ಕೋಟಿ ರೂ. ಮೊತ್ತವನ್ನು ವಶಕ್ಕೆ ಪಡೆದಿದೆ. ಇದರ ಮುಂದುವರಿದ ಭಾಗವಾಗಿ, ರೋಷನ್ ಸಲ್ಮಾನನಿಗೆ ಸೇರಿದ 2.14 ರೂ. ಕೋಟಿ ಮೌಲ್ಯದ ಆಸ್ತಿ, ಪಿ.ಎಂ. ಎಂಟರ್ಪ್ರೈಸಸ್ ಬ್ಯಾಂಕ್ ಖಾತೆಯ 70.8 ಲಕ್ಷ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
The Enforcement Directorate (ED) has seized assets worth ₹2.85 crore, including a boat and bank accounts, belonging to Roshan Saldanha, a resident of Jeppinamogaru, who is the main accused in a multi-crore fraud case.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm