ಬ್ರೇಕಿಂಗ್ ನ್ಯೂಸ್
29-12-20 12:03 pm Headline Karnataka News Network ಕ್ರೈಂ
ಮುಂಬೈ, ಡಿ.29: "ರಿಪಬ್ಲಿಕ್ ಟಿವಿ ಮಾಲಕ ಹಾಗೂ ಸಂಪಾದಕ ಅರ್ನಬ್ ಗೋಸ್ವಾಮಿ ಟಿಆರ್ಪಿ ತಿದ್ದಲು ನನಗೆ ಲಂಚ ನೀಡಿದ್ದು ನಿಜ" ಎಂದು ಟಿಆರ್ಪಿ ಹಗರಣದಲ್ಲಿ ಬಂಧಿತನಾಗಿರುವ ಬ್ರಾಡ್ಕಾಸ್ಟ್ ರೀಸರ್ಚ್ ಆಡಿಯನ್ಸ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಓ ಪಾರ್ಥ ದಾಸ್ಗುಪ್ತಾ ಪೊಲೀಸ್ ತನಿಖೆಯ ವೇಳೆ ಬಾಯಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
"ತಮ್ಮ ಚಾನೆಲ್ಗೆ ಅಧಿಕ ಟಿಆರ್ಪಿ ನೀಡುವ ಸಲುವಾಗಿ ಲಕ್ಷಾಂತರ ರೂಪಾಯಿ ನಗದು ಹಾಗೂ ದುಬಾರಿ ವಾಚು ನೀಡಿದ್ದರು" ಎಂದು ವಿಚಾರಣೆ ವೇಳೆ ಪಾರ್ಥ ದಾಸ್ಗುಪ್ತಾ ಅವರು ಮುಂಬೈ ಪೊಲೀಸ್ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪಾರ್ಥ ದಾಸ್ಗುಪ್ತಾ ಮನೆಯಿಂದ ಮೂರು ಕೆಜಿ ಬೆಳ್ಳಿಯನ್ನು ಕೂಡಾ ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. 2013ರಿಂದ 2019ರವರೆಗೆ ದಾಸ್ಗುಪ್ತಾ ಬಿಎಆರ್ಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು. ಅರ್ನಬ್ ಗೋಸ್ವಾಮಿ ತಮ್ಮ ಇಂಗ್ಲಿಷ್ ಚಾನೆಲ್ ರಿಪಬ್ಲಿಕ್ ಟಿವಿ ಮತ್ತು ಹಿಂದಿ ಚಾನಲ್ ರಿಪಬ್ಲಿಕ್ ಭಾರತ್ಗೆ ಟಿಆರ್ಪಿ ನೆರವು ನೀಡಲು ನೀಡಿದ ಲಂಚದ ಹಣದಲ್ಲಿ ಈ ಬೆಳ್ಳಿ ಖರೀದಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಈ ತಿಂಗಳ 24ರಂದು ಗೋವಾದಿಂದ ಪುಣೆಗೆ ಹೋಗುತ್ತಿದ್ದ ದಾಸ್ಗುಪ್ತಾ (55) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ಅಕ್ರಮದಲ್ಲಿ ಅರ್ನಬ್ ಗೋಸ್ವಾಮಿ ಜತೆ ದಾಸ್ಗುಪ್ತ ಶಾಮೀಲಾಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
"ಟಿಆರ್ಪಿ ಮಾಪನಕ್ಕೆ ಬಾರೋಮೀಟರ್ ಅಳವಡಿಸಿದ್ದ ಮನೆಗಳ ಬಗೆಗಿನ ರಹಸ್ಯ ಮಾಹಿತಿಯನ್ನು ದಾಸ್ಗುಪ್ತಾ, ಅರ್ನಬ್ ಜತೆ ಹಂಚಿಕೊಂಡಿದ್ದರು. ಈ ದತ್ತಾಂಶ ಬಳಸಿಕೊಂಡು ಮನೆಮಂದಿಗೆ ಲಂಚ ನೀಡಿ, ಮನೆಮಂದಿಗೆ ಇಂಗ್ಲಿಷ್ ಭಾಷೆಯ ಅರಿವು ಇಲ್ಲದಿದ್ದರೂ ಆ ಚಾನೆಲ್ ಆನ್ ಮಾಡಿ ಇಡುವಂತೆ ಅರ್ನಬ್ ಕೇಳಿಕೊಂಡಿದ್ದರು. ಕೆಲ ಮನೆಗಳು ಮುಚ್ಚಿದ್ದರೂ ಆ ಮನೆಯಲ್ಲಿ ಚಾನಲ್ ಮಾತ್ರ ಆನ್ ಇರುತ್ತಿತ್ತು. ಟಿಆರ್ಪಿ ಹಗರಣದಲ್ಲಿ ಶಾಮೀಲಾದವರ ಸೂಚನೆ ಮೇರೆಗೆ ಹೀಗೆ ಮಾಡಲಾಗುತ್ತಿತ್ತು" ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ವಿವರಿಸಿದ್ದಾರೆ.
In a remand report submitted before a court on Monday, the Mumbai Police said that Republic TV editor-in-chief Arnab Goswami had paid “lakhs of rupees” to Partho Dasgupta, former CEO of the Broadcast Audience Research Council (BARC), to “increase” the Television Rating Points (TRPs) of the two Republic news channels.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm