ಬ್ರೇಕಿಂಗ್ ನ್ಯೂಸ್
14-11-25 05:32 pm HK News Desk ಕ್ರೈಂ
ಬೆಳಗಾವಿ, ನ.14 : ಅಮೆರಿಕ ನಾಗರಿಕರ ಮೊಬೈಲ್ ಹಾಗೂ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ವಂಚಿಸುತ್ತಿದ್ದ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಬೆಳಗಾವಿ ಸೈಬರ್ ಅಪರಾಧ ವಿಭಾಗದ ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದು, 37 ಲ್ಯಾಪ್ಟಾಪ್, ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಅಜಂ ನಗರದ ಸರ್ಕಲ್ ಬಳಿಯ ಕುಮಾರ್ ಹಾಲ್ನಲ್ಲಿ ಅನಧಿಕೃತ ಕಾಲ್ ಸೆಂಟರ್ ನಿರ್ವಹಿಸುತ್ತಿರುವ ಕುರಿತು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸೈಬರ್ ಪೊಲೀಸರು ದಾಳಿ ನಡೆಸಿ, ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಜನರಿಗೆ ವಂಚಿಸಿ ಹಣ ವರ್ಗಾಯಿಸಿಕೊಳ್ಳುತ್ತಿದ್ದ ಜಾಲ ಭೇದಿಸಿದ್ದಾರೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ರಾವ್ ಭೋರಸೆ ತಿಳಿಸಿದ್ದಾರೆ.



ಆರೇಳು ತಿಂಗಳಿಂದ ಈ ಕಾಲ್ ಸೆಂಟರ್ ಕಾರ್ಯ ನಿರ್ವಹಿಸುತ್ತಿದ್ದು, 33 ಜನ ಕೆಲಸ ಮಾಡುತ್ತಿದ್ದರು. ಇವರು ಅಮೆರಿಕದ ಪ್ರಜೆಗಳಿಗೆ ಕರೆ ಮಾಡಿ ಶೇರ್ ಟ್ರೇಡಿಂಗ್, ಹೊಸ ಮೊಬೈಲ್ ಆಫರ್ ಸೇರಿ ನಾನಾ ಆಮಿಷ ಒಡ್ಡಿ ಹಣ ದೋಚುತ್ತಿದ್ದರು. ದಾಳಿ ವೇಳೆ ಪತ್ತೆಯಾದ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಪರಿಶೀಲಿಸಿದಾಗ ವಿಶೇಷ ಸಾಫ್ಟ್ವೇರ್ ಬಳಸಿ ಅಮೆರಿಕದ ಅಸಂಖ್ಯಾತ ಮೊಬೈಲ್ಗಳಿಗೆ ಕರೆ ಮಾಡಿರುವುದು ಗೊತ್ತಾಗಿದೆ. ಇವರು ತಮ್ಮ ನೈಜ ಲೊಕೇಷನ್ ಮಾಹಿತಿ ಮರೆಮಾಚಿ ನಕಲಿ ಲೊಕೇಷನ್ ತೋರಿಸುವ ಸಾಫ್ಟ್ವೇರ್ ಬಳಕೆ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಹೊರ ರಾಜ್ಯದವರು
ಬಂಧಿತ ಆರೋಪಿಗಳು 25ರಿಂದ 35 ವರ್ಷದವರಾಗಿದ್ದು, ಅಸ್ಸಾಂ, ನಾಗಾಲ್ಯಾಂಡ್, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಸೇರಿ ಇತರ ರಾಜ್ಯದವರಿದ್ದಾರೆ. ಬಂಧಿತರಿಂದ 6.50 ಲಕ್ಷ ರೂ. ಮೌಲ್ಯದ 37 ಲ್ಯಾಪ್ಟಾಪ್, 1.50 ಲಕ್ಷ ರೂ. ಮೌಲ್ಯದ 37 ಮೊಬೈಲ್, 10 ಸಾವಿರ ರೂ. ಮೌಲ್ಯದ 3 ವೈಫೈ ರೂಟರ್ ವಶಕ್ಕೆ ಪಡೆಯಲಾಗಿದೆ. ಸಿಐಡಿ ನೆರವು ಪಡೆದು ಅಮೆರಿಕದಲ್ಲಿ ದಾಖಲಾದ ಪ್ರಕರಣಗಳ ಪರಿಶೀಲನೆಗೆ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
In a major crackdown, the Belagavi Cyber Crime Police raided an illegal call centre that was cheating US citizens through online trading and investment scams. A total of 33 accused have been arrested, and 37 laptops and multiple mobile phones have been seized.a
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm