ಬ್ರೇಕಿಂಗ್ ನ್ಯೂಸ್
19-11-25 06:07 pm Bangalore Correspondent ಕ್ರೈಂ
ಬೆಂಗಳೂರು, ನ 19 : ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ನಿಲ್ಲಿಸಿ ಕೋಟ್ಯಾಂತರ ರೂಪಾಯಿ ದರೋಡೆ ಮಾಡಿದ್ದಾರೆ.
ಬೆಂಗಳೂರಿನ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ವಾಹನದಲ್ಲಿದ್ದ 7 ಕೋಟಿ 11 ಲಕ್ಷ ರೂಪಾಯಿ ಹಣವನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


ಹಲವು ದಿನಗಳಿಂದ ಸಂಚು ರೂಪಿಸಿದ್ದ ಗ್ಯಾಂಗ್ ಬುಧವಾರ ಬೆಳಿಗ್ಗೆ ಎಟಿಎಂಗೆ ಹಣ ಹಾಕಲು ಹೊರಟಿದ್ದ ವ್ಯಾನ್ ಅನ್ನು ಹಿಂಬಾಲಿಸಿದೆ. ವಾಹನವನ್ನು ಅಡ್ಡಗಟ್ಟಿ ಸಿಬ್ಬಂದಿಗೆ ಬೆದರಿಸಿ ವಾಹನದ ಹಿಂಬದಿಯ ಡೋರ್ ತೆರೆದು ಎಟಿಎಂಗಳಿಗೆ ತುಂಬಲು ಇಟ್ಟಿದ್ದ ಕೋಟ್ಯಾಂತರ ಹಣವನ್ನು ತುಂಬಿಕೊಂಡು ಇನೋವಾ ಕಾರಿನಲ್ಲಿ ತಪ್ಪಿಸಿಕೊಂಡಿದ್ದಾರೆ.
7 ಜನರ ಗ್ಯಾಂಗ್ನಿಂದ ದಾಳಿ:
ಎಟಿಎಂ ಹಣ ಸಾಗಿಸುವ ವ್ಯಾನ್ನಲ್ಲಿ ಓರ್ವ ಡ್ರೈವರ್, ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಸೇರಿ 4 ಮಂದಿ ಇದ್ದರು. ಕೆಎ 03 ಎನ್ಸಿ 8052 ನಂಬರ್ನ ಇನ್ನೋವಾ ಕಾರಿನಲ್ಲಿ ಬಂದಿದ್ದ ಗ್ಯಾಂಗ್ನಲ್ಲಿ 7 - 8 ಜನರ ಇದ್ದರು. ಕಾರಿನ ಹಿಂಬರಿ ಗವರ್ನಮೆಂಟ್ ಆಫ್ ಇಂಡಿಯಾ ಎಂಬ ಬೋರ್ಡ್ ಹಾಕಿಕೊಂಡಿದ್ದರು. ಜಯನಗರದ ಅಶೋಕ ಪಿಲ್ಲರ್ ಬಳಿ ನಾವು ಆರ್ಬಿಐನವರು ಎಂದು ಹೇಳಿ ವಾಹನ ನಿಲ್ಲಿಸಿದ್ದಾರೆ. ಗನ್ಮ್ಯಾನ್ ಸೇರಿದಂತೆ ಎಲ್ಲರನ್ನೂ ವ್ಯಾನ್ನಿಂದ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದೊಯ್ದಿದು ಕೃತ್ಯವೆಸಗಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ತಂಡವು ಶ್ವಾನದಳ ಆಗಮಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ದರೋಡೆಕೋರರು ಬಳಸಿದ ಇನೋವಾ ಕಾರಿನ ನಂಬರ್ ಪ್ಲೇಟ್ ನಕಲಿ ಎಂದು ಪೊಲೀಸ್ ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ. ವಾಸ್ತವವಾಗಿ ಕೆಎ 03 ಎನ್ಸಿ 8052 ಸಂಖ್ಯೆಯು ಸ್ವಿಪ್ಟ್ ಕಾರಿನದ್ದಾಗಿದೆ. ಕಳ್ಳತನಕ್ಕೆಂದು ಆ ನಂಬರ್ ಪ್ಲೇಟ್ ಬಳಸಿದ್ದಾರೆ.
ಸಿಬ್ಬಂದಿಗಳು ಹಲವು ವರ್ಷಗಳಿಂದ ಕೆಲಸ:
ವಾಹನದಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅಶೋಕ ಪಿಲ್ಲರ್ ಬಳಿ ವಾಹನವನ್ನು ಅಡ್ಡಗಟ್ಟಿ ಎಲ್ಲಾ ಸಿಬ್ಬಂದಿಯನ್ನು ಇಳಿಸಿ ಚಾಲಕನೊಬ್ಬನನ್ನು ವಾಹನದಲ್ಲಿ ಕರೆದುಕೊಂಡು ಹೋಗಿ ಡೈರಿ ವೃತ್ತದ ಫ್ಲೈಓವರ್ ಮೇಲೆ ನಿಲ್ಲಿಸಿಕೊಂಡು ಹಣವನ್ನು ಬೇರೆ ವಾಹನಕ್ಕೆ ವರ್ಗಾಹಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಸಿಎಂಎಸ್ ಏಜೆನ್ಸಿ ಅಧಿಕಾರಿ ತಿಳಿಸಿದ್ದಾರೆ.
Bengaluru witnessed a dramatic daylight heist on Wednesday when a gang posing as RBI officials intercepted an ATM cash-loading van near Dairy Circle flyover and escaped with ₹7.11 crore. The robbers, travelling in an Innova with a fake “Government of India” board, forced the vehicle to stop at Jayanagar’s Ashoka Pillar, claiming to be from the RBI.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm