ಬ್ರೇಕಿಂಗ್ ನ್ಯೂಸ್
19-11-25 09:26 pm Mangalore Correspondent ಕ್ರೈಂ
ಪುತ್ತೂರು, ನ.19 : ಸುಳ್ಯದಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ ಎಂಬ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಪ್ರಾರಂಭಿಸಿ, ಸಾರ್ವಜನಿಕರಿಂದ ಕಂತುಗಳ ಮೂಲಕ ಹಣ ಸಂಗ್ರಹಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಮೂರು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೆನಿಫಿಟ್ ಸ್ಕೀಂ ಹೆಸರಿನಲ್ಲಿ ಪ್ರತಿ ತಿಂಗಳು ಏಜಂಟರ ಮೂಲಕ ಹಣ ಸಂಗ್ರಹಿಸುತ್ತಿದ್ದರು. ಸುಳ್ಯ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ ಒಟ್ಟು 4115 ಸದಸ್ಯರಿಂದ ಹಣ ಸಂಗ್ರಹಿಸಿ ಹಣವನ್ನಾಗಲೀ, ಯಾವುದೇ ವಸ್ತುವನ್ನಾಗಾಲಿ ನೀಡದೇ ರೂ ₹3,08,62,500/- ವಂಚನೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಆರೋಪಿಗಳಾದ ಶಿವಪ್ರಕಾಶ್, ಕೆ.ಪಿ. ಗಣೇಶ್, ಕೆ.ಪಿ. ಕೃಷ್ಣಪ್ಪ ಗೌಡ, ಗೀತಾ ಕೆ.ಎಸ್., ಭಾರತಿ, ಗೀತಾ ಗಣೇಶ್, ಎನ್.ಇ. ವೈ. ಕಮಲಾಕ್ಷ, ಕೆ. ನಾಗೇಶ ಎಂಬವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಸುಳ್ಯ ಪೊಲೀಸ್ ಠಾಣಾಧಿಕಾರಿ ಬ್ರಿಜೇಶ್ ಮ್ಯಾಥ್ಯೂರವರು ಪ್ರಕರಣದ ಭಾಗಶಃ ತನಿಖೆಯನ್ನು ನಡೆಸಿದ್ದು, ಚಂದ್ರಶೇಖರ್ ಹೆಚ್.ವಿ ಅವರು ತನಿಖೆಯನ್ನು ಪೂರ್ಣಗೊಳಿಸಿ ಸುಳ್ಯದ ಎಸ್.ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸದ್ರಿ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಬಿ. ಮೋಹನ್ ಬಾಬು ಅವರ ಸಮಕ್ಷಮ ನಡೆದು 2025ರ ಅ.30ರಂದು ಪೂರ್ಣಗೊಳಿಸಿದ್ದು ಆರೋಪಿಗಳ ಪೈಕಿ ಕೆ.ಪಿ.ಗಣೇಶ್, ಗೀತಾ ಕೆ.ಎಸ್., ಭಾರತಿ ಅವರ ಅಪರಾಧ ಸಾಬೀತಾಗಿ ಅವರುಗಳನ್ನು ದೋಷಿ ಎಂದು ತೀರ್ಮಾನಿಸಿ ಉಳಿದ ಆರೋಪಿಗಳನ್ನು ಸಾಕ್ಷ್ಯ ಕೊರತೆಯಿಂದ ಖುಲಾಸೆಗೊಳಿಸಿ ಬಿಡುಗಡೆ ಮಾಡಿದ್ದರು. ಈ ನಡುವೆ, 1ನೇ ಆರೋಪಿ ಶಿವಪ್ರಕಾಶ್ ಮರಣ ಹೊಂದಿರುವುದರಿಂದ ಅವರ ಮೇಲಿನ ಪ್ರಕರಣ ಸ್ಥಗಿತಗೊಳಿಸಲಾಗಿದೆ.
ಇದೇ ನ.03ರಂದು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಘೋಷಣೆ ಮಾಡಿದ್ದು ಆರೋಪಿಗಳಾದ ಕೆಪಿ ಗಣೇಶ್, ಗೀತಾ ಕೆ.ಎಸ್, ಭಾರತಿ ಎಂಬವರಿಗೆ ಕಲಂ 406 ಸಹವಾಚಕ 149 ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ, ಕಲಂ 409 ಮತ್ತು 420 ರಡಿಯಲ್ಲಿ ಸಹವಾಚಕ 149 ರೊಂದಿಗೆ ಎರಡೂ ಕಲಂಗಳಿಗೆ ಆರೋಪಿಗಳಿಗೆ ಪ್ರತ್ಯೇಕವಾಗಿ 3 ವರ್ಷಗಳ ಕಾಲ ಸಾದಾ ಕಾರಾಗೃಹ ವಾಸ ಮತ್ತು ₹10,000/- ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಹೆಚ್ಚುವರಿ ಸಾದಾ ಕಾರಾಗೃಹ ವಾಸ ವಿಧಿಸಲಾಗಿದೆ. ಮೇಲಿನ ಎಲ್ಲಾ ಶಿಕ್ಷೆಗಳು ಏಕಕಾಲಕ್ಕೆ ಜಾರಿಗೊಳಿಸುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರಮೇಶ್ ವಾದ ಮಂಡಿಸಿರುತ್ತಾರೆ.
In a major verdict, the Sullia SCJ & JMFC Court has sentenced three accused—including two women—to three years of imprisonment in a multi-crore fraud case involving the “Sri Tatvamasi Charitable Trust” and “Sri Tatvamasi Enterprises.”
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 08:37 pm
HK News Staffer
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm