ಬ್ರೇಕಿಂಗ್ ನ್ಯೂಸ್
21-11-25 11:07 pm Bangalore Correspondent ಕ್ರೈಂ
ಬೆಂಗಳೂರು, ನ.21 : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಹಾನ್ ದರೋಡೆ ಪ್ರಕರಣಕ್ಕೆ ರಾಜ್ಯದ ಪೊಲೀಸ್ ಪೇದೆಯೇ “ಮಾಸ್ಟರ್ಮೈಂಡ್” ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ದರೋಡೆ ತಂಡದ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಣ್ಣಪ್ಪ ನಾಯಕ್ ಭಾಗಿಯಾಗಿರುವ ಮಾಹಿತಿ ಇದೆ. ದರೋಡೆಯಲ್ಲಿ ಗೋವಿಂದಪುರ ಠಾಣೆಗೆ ಸೇರಿದ್ದ ಮತ್ತೊಬ್ಬ ಕಾನ್ಸ್ಟೇಬಲ್ ಕೂಡ ಭಾಗಿಯಾಗಿದ್ದಾನೆಂದು ಹೇಳಲಾಗಿದೆ. ಒಟ್ಟು ದರೋಡೆ ಕೃತ್ಯಕ್ಕೆ ಇವರೇ ಆರೋಪಿಗಳಿಗೆ ಪ್ಲಾನ್ ನೀಡಿದ್ದರು. ಅಣ್ಣಪ್ಪ ನಾಯಕ್ ಯೋಜನೆಯ ಮಾಸ್ಟರ್ಮೈಂಡ್ ಆಗಿದ್ದು, ದರೋಡೆ ನಂತರ ಪೊಲೀಸರಿಂದ ಹೇಗೆ ಪಾರಾಗಬೇಕು ಎಂಬ ತಂತ್ರಗಳನ್ನು ಹೇಳಿಕೊಟ್ಟಿದ್ದಾನೆ.



ದರೋಡೆಯಲ್ಲಿ CMS ಕಂಪನಿ ಮಾಜಿ ಉದ್ಯೋಗಿ ಝೇವಿಯರ್ ಕೂಡ ಸೇರಿದ್ದಾನೆ. ಅಣ್ಣಪ್ಪ ಮತ್ತು ಈತ ಸ್ನೇಹಿತರಾಗಿದ್ದು ಒಂದು ವರ್ಷದಿಂದ ಪ್ಲಾನ್ ನಡೆಸಿದ್ದರು. ತನಿಖೆಯ ವೇಳೆ ಪೇದೆ ಅಣ್ಣಪ್ಪ ನಾಯಕ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.
ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ರಾಬರಿ ಕೃತ್ಯ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ, ಎಂಜಿ ರೋಡ್ ಬಳಿ ಕ್ರಿಕೆಟ್ ಬುಕ್ಕಿಗಳಿಗೆ ಬೆದರಿಕೆ, ಜೈಲಿನಲ್ಲಿ ಪರಿಚಯವಾದ ಹುಡುಗರನ್ನು ಬಳಸಿಕೊಂಡು ಅನೇಕ ಕೃತ್ಯಗಳನ್ನು ನಡೆಸಿದ್ದಾನೆ, ದೊಡ್ಡ ದರೋಡೆ ಮಾಡಿ ಸೆಟ್ಲ್ ಆಗುವ ಯೋಜನೆ ಹಾಕಿದ್ದ. ಝೇವಿಯರ್ ಮತ್ತು ಅಣ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
A shocking revelation has emerged in Karnataka, where a police constable himself is suspected to be the mastermind behind a major multi-crore robbery. Bengaluru police have arrested Govindapura Police Constable Annappa Nayak, who is believed to have planned the heist executed in the Kumbalagodu police station limits.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm