ಬ್ರೇಕಿಂಗ್ ನ್ಯೂಸ್
24-11-25 08:37 pm HK News Desk ಕ್ರೈಂ
ಕಾರವಾರ, ನ 24 : ಆನ್ಲೈನ್ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂಪಾಯಿ ವಂಚಿಸಿದ ಅಂತಾರಾಜ್ಯ ವಂಚಕರ ಜಾಲವನ್ನು ಉತ್ತರ ಕನ್ನಡದ ಸಿಇಎನ್ (CEN) ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಎಂಬವರು ಫೇಸ್ಬುಕ್ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, 'MarketAxess' ಎಂಬ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಿ, ಮೇ 28, 2025 ರಿಂದ ಜುಲೈ 23, 2025 ರ ಅವಧಿಯಲ್ಲಿ ಹಂತ, ಹಂತವಾಗಿ ಒಟ್ಟು ರೂ. 46,50,000 ಹಣವನ್ನು ಹೂಡಿಕೆ ಮಾಡಿಸಿಕೊಂಡಿದ್ದರು. ಹಣ 75,00,000 ರೂ.ಗಳಾದರೂ ವಿತ್ಡ್ರಾ ಮಾಡಲು ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿದೆ ಎಂದು ದೂರುದಾರರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಂಧಿತರಲ್ಲಿ ಮೂವರು ಬ್ಯಾಂಕ್ ರಿಲೇಶನ್ಶಿಪ್ ಮ್ಯಾನೇಜರ್ಗಳು:
ಅದರಂತೆ, ಪ್ರಕರಣದ ತನಿಖೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸಿಇಎನ್ ಡಿವೈಎಸ್ಪಿ ಬಿ. ಅಶ್ವಿನಿ ಅವರ ನೇತೃತ್ವದ ವಿಶೇಷ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಎಂ.ಡಿ ಆಲಮ್ (ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ), ಹೈದರಾಬಾದ್ನಲ್ಲಿ ಬಂಧಿಸಲಾದ ಬಿಲ್ಲೆ ಪ್ರವೀಣಕುಮಾರ್ (35) ಮತ್ತು ವಿನಯ್ ಕುಮಾರ್ (30) ಎಂಬವರನ್ನು ಬಂಧಿಸಿದ್ದಾರೆ. ಇವರು ಆರ್ಬಿಎಲ್ (RBL) ಬ್ಯಾಂಕ್ನಲ್ಲಿ ರಿಲೇಶನ್ಶಿಪ್ ಮ್ಯಾನೇಜರ್ಗಳಾಗಿದ್ದು, ವಂಚನೆಗೆ ಅಕ್ರಮವಾಗಿ ಖಾತೆ ತೆರೆದು ಸಹಕರಿಸಿದ್ದರು. ಇನ್ನೋರ್ವ ಆರೋಪಿ ಶಮೀಮ್ ಅಖ್ತರ್ (55) ಎಂಬಾತ ಬಿಹಾರ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಈತ ದೂರುದಾರರನ್ನು ವಂಚಕರ ಬಲೆಗೆ ಬೀಳಿಸಲು ಸಹಕರಿಸಿದ್ದ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಜಾಹೀರಾತು ನಂಬಿ ಮೋಸ ಹೋಗದಿರಿ:
ಈ ಪ್ರಕರಣದ ಮೂಲಕ ಪೊಲೀಸರು ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ 'ಅಧಿಕ ಲಾಭ'ದ ಜಾಹೀರಾತುಗಳನ್ನು ನಂಬದಂತೆ ತಿಳಿಸಿದ್ದಾರೆ. ಅಧಿಕೃತವಲ್ಲದ ಟ್ರೇಡಿಂಗ್ ಆ್ಯಪ್ಗಳಲ್ಲಿ ಹಣ ಹೂಡಿಕೆ ಮಾಡಬೇಡಿ. ಅಲ್ಲದೆ, ಅಪರಿಚಿತರು ವಾಟ್ಸ್ಆ್ಯಪ್ ಅಥವಾ ಟೆಲಿಗ್ರಾಂ ಮೂಲಕ ನೀಡುವ ಆರ್ಥಿಕ ಸಲಹೆಗಳನ್ನು ನಂಬಿ ಹಣ ವರ್ಗಾಯಿಸಬೇಡಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ಪೊಲೀಸರು ಮನವಿ ಮಾಡಿದ್ದಾರೆ.
A major interstate fraud network has been busted by the Uttara Kannada CEN (Cyber Economic and Narcotics) police after a Honnavar-based businessman was cheated of ₹46.50 lakh through a fake online forex trading scheme. Shockingly, three of the arrested accused are bank relationship managers who helped the fraudsters by illegally opening accounts.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm