ಬ್ರೇಕಿಂಗ್ ನ್ಯೂಸ್
26-11-25 12:10 pm Mangalore Correspondent ಕ್ರೈಂ
ಮಂಗಳೂರು, ನ.26 : ಬಜ್ಪೆ ಠಾಣೆ ವ್ಯಾಪ್ತಿಯ ಎಡಪದವು ರಸ್ತೆಯಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಮಂಗಳೂರು ಬೆಂಗ್ರೆ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಎಂದು ಗುರುತಿಸಲಾಗಿದೆ.




ಇರುವೈಲು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂಬ ಯುವಕ ಮಂಗಳೂರಿನಲ್ಲಿ ಕೆಲಸ ಮುಗಿಸಿ ಮರಳುತ್ತಿದ್ದ ಸಂದರ್ಭ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ತಲವಾರು ಹಿಡಿದು ಹೋಗುತ್ತಿದ್ದುದನ್ನು ಗಮನಿಸಿ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಲು ಮುಂದಾಗಿದ್ದಾರೆ. ಇದನ್ನು ಕಂಡ ಆರೋಪಿಗಳು ರಸ್ತೆಯಲ್ಲಿ ಅಖಿಲೇಶ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ, ತನ್ನ ಗೆಳೆಯರಿಗೆ ವಿಷಯ ತಿಳಿಸಿದ್ದು ಸ್ಥಳೀಯರು ಎಡಪದವು ಬಳಿ ಅಡ್ಡಹಾಕಿದ್ದಾರೆ.
ಈ ವೇಳೆ, ಹಿಂಬದಿ ಇದ್ದ ಯುವಕ ಸಿನಾನ್ ಬೈಕಿನಿಂದ ಇಳಿದು ಓಡಲು ಯತ್ನಿಸಿದ್ದು ಎಡಪದವು ಕಡೆಯಿಂದ ಮೇಲಕ್ಕೆ ಇಳಿಜಾರು ರಸ್ತೆಯಲ್ಲಿ ಓಡಿದ್ದಾನೆ. ಅಲ್ಲದೆ, ಬಸ್ ಇನ್ನಿತರ ವಾಹನಗಳನ್ನು ನಿಲ್ಲಿಸಿ ಡ್ರಾಪ್ ಕೇಳಿದ್ದಾನೆ. ವಾಹನ ನಿಲ್ಲಿಸದೇ ಹೋದಾಗ ಸ್ಥಳೀಯರು ಸೇರಿ ಹಿಡಿದಿದ್ದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಖಿಲೇಶ್ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು ಬಂದರು ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಸ್ಥಳದಲ್ಲೇ ಪೊಲೀಸರಿಗೆ ಒಪ್ಪಿಸಿದ್ದರು. ಉಳಿದಂತೆ, ವೇಣೂರು ನಿವಾಸಿ ಇರ್ಷಾದ್ ನನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಜೊತೆಗೆ ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Bajpe police have arrested four men for attacking a youth with a sword on Edapadavu Road in Mangaluru. The incident occurred when the victim tried to record a video of the accused riding on a bike with weapons. Local residents helped capture one of the attackers, and police arrested all four — Sinan, Irshad, Suhail Akram, and Nisan — within hours.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm