ಬ್ರೇಕಿಂಗ್ ನ್ಯೂಸ್
27-11-25 09:07 pm Mangalore Correspondent ಕ್ರೈಂ
ಮಂಗಳೂರು, ನ.27 : ಹೊರಗುತ್ತಿಗೆ ಸಿಬಂದಿಯೊಬ್ಬರ ಸಂಬಳವನ್ನು ನೀಡುವುದಕ್ಕಾಗಿ ಲಂಚ ಕೇಳಿ, 30 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಉಳ್ಳಾಲ ಮತ್ತು ಮಂಗಳೂರು ತಾಲೂಕಿನ ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕ ಸೇರಿ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ನಗರ ಆಸ್ತಿ ಮಾಲೀಕತ್ವ ದಾಖಲೆ (ಯುಪಿಓಆರ್) ಯೋಜನೆಯಲ್ಲಿ ಹೊರ ಗುತ್ತಿಗೆ ಸಿಬಂದಿಯಾಗಿದ್ದ ವ್ಯಕ್ತಿಯೊಬ್ಬರನ್ನು ಕೆಲಸದಲ್ಲಿ ಮುಂದುವರಿಸುವುದು ಮತ್ತು ಬಾಕಿಯಿರುವ ಸಂಬಳದ ಮೊತ್ತವನ್ನು ಮಾಡಿಕೊಡಲು ಭೂ ದಾಖಲೆಗಳ ಅಧಿಕಾರಿಗಳು ಲಂಚದ ಬೇಡಿಕೆಯೊಡ್ಡಿದ್ದರು. ಉಳ್ಳಾಲದ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಸರ್ವೇಯರ್ ಕೃಷ್ಣಮೂರ್ತಿ 50 ಸಾವಿರ, ಮಂಗಳೂರು ತಾಲೂಕು ಸರ್ವೆ ವಿಭಾಗದ ಸಹಾಯಕ ನಿರ್ದೇಶಕ ಬಿ.ಕೆ ರಾಜು 10 ಸಾವಿರ, ಸರ್ವೆ ಸುಪರ್ ವೈಸರ್ ಎಸ್.ಧನಶೇಖರ ರೂ. 10 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು.
ಈ ಬಗ್ಗೆ ದೂರು ಪಡೆದ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದು, ನ.27ರ ಗುರುವಾರ ಸಂತ್ರಸ್ತ ವ್ಯಕ್ತಿಯಿಂದ ಲಂಚದ ಹಣ 30 ಸಾವಿರವನ್ನು ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ.ಕುಮಾರಿ, ಸುರೇಶ್ ಕುಮಾರ್, ಪೊಲೀಸ್ ನಿರೀಕ್ಷಕರಾದ ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವಾರ್, ರಾಜೇಂದ್ರ ನಾಯ್ಡು ಸಿಬಂದಿಗಳ ಜೊತೆ ಭಾಗವಹಿಸಿದ್ದರು.
The Lokayukta officials arrested three officers from the land records (survey) department of Ullal and Mangaluru taluk for allegedly demanding and accepting a bribe of ₹30,000. The officers had reportedly demanded money to continue the service of an outsourced employee working under the ULPOR (Urban Property Ownership Record) project and to release his pending salary.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm