ಬ್ರೇಕಿಂಗ್ ನ್ಯೂಸ್
28-11-25 06:23 pm HK News Desk ಕ್ರೈಂ
ದಾವಣಗೆರೆ, ನ 28 : ಚಿನ್ನಾಭರಣ ತಯಾರಕನ ಬಳಿ ಇದ್ದ 76 ಗ್ರಾಂ. ಬಂಗಾರವನ್ನು ಪೊಲೀಸರೇ ದರೋಡೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಪಿಎಸ್ಐಗಳು, ಅವರಿಗೆ ಸಹಾಯ ಮಾಡಿದ ಇಬ್ಬರು ಚಿನ್ನಾಭರಣ ವ್ಯಾಪಾರಿಗಳು ಸೇರಿ ಏಳು ಮಂದಿ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕಾರವಾರದ ಪದ್ಮನಾಭ ನಗರ ನಿವಾಸಿ, ಚಿನ್ನಾಭರಣ ತಯಾರಕ ಎಂ. ವಿಶ್ವನಾಥ ಚಿನ್ನಾಭರಣ ಕಳೆದುಕೊಂಡವರು. ರಾಣೆಬೆನ್ನೂರು ಸಂಚಾರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಪ್ರವೀಣ್, ಹಾವೇರಿ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣೆಯ ಪಿಎಸ್ಐ ಮಾಳಪ್ಪ, ದಾವಣಗೆರೆಯ ಚಿನ್ನ-ಬೆಳ್ಳಿ ವ್ಯಾಪಾರಿಗಳಾದ ಸತೀಶ್ ರೇವಣ್ಕರ್, ನಾಗರಾಜ್ ರೇವಣ್ಕರ್, ದಿಳ್ಳೆಪ್ಪ, ನಾಗೇಶ್ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಬಂಧಿತರಾಗಿರುವ ಚಿನ್ನ-ಬೆಳ್ಳಿ ವ್ಯಾಪಾರಿಗಳು ವಿಶ್ವನಾಥ್ ಬಳಿ ಬಂಗಾರ ಇರುವುದು, ಆತ ಬರುವ, ಹೋಗುವ ಸಮಯದ ಬಗ್ಗೆ ಪ್ರಮುಖ ಆರೋಪಿಗಳಿಗೆ ಮಾಹಿತಿ ನೀಡಿ, ವಿಶ್ವನಾಥ ಅವರ ಫೋಟೋ ಕೂಡ ಕೊಟ್ಟಿದ್ದರು.
'ಆರೋಪಿತರಿಂದ ಅಂದಾಜು 8 ಲಕ್ಷ ರೂ.ಮೌಲ್ಯದ ಬಂಗಾರ, ಮೂರು ಕಾರು, ಏರ್ ಗನ್, ಎರಡು ನಕಲಿ ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಉಪ ವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ. ಇತ್ತೀಚೆಗೆ ಆರೋಪಿ ಮಾಳಪ್ಪನ ಬಗ್ಗೆ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಆತನ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಿ, ವೈರ್ಲೆಸ್ ವಿಭಾಗಕ್ಕೆ ನೇಮಿಸಲಾಗಿತ್ತು. ಅದೇ ರೀತಿ ಮತ್ತೊಬ್ಬ ಆರೋಪಿ ಪ್ರವೀಣ ಎಂಬಾತನನ್ನು ಸಾಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ವರದಿ ಮಾಡಿಕೊಂಡಿರಲಿಲ್ಲ,' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ
ಆಭರಣ ತಯಾರಕರೊಬ್ಬರಿಂದ 78 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ ಆರೋಪ ಎದುರಿಸುತ್ತಿರುವ ಪ್ರೊಬೇಷನರಿ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟಿಯನ್ನು ಸೇವೆಯಿಂದ ವಜಾಗೊಳಿಸಿ ಪೊಲೀಸ್ ಇಲಾಖೆ ಆದೇಶಿಸಿದೆ. ಮತ್ತೊಬ್ಬ ಪಿಎಸ್ಐ ಪ್ರವೀಣ್ಕುಮಾರ್ನನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮಾಳಪ್ಪ ಚಿಪ್ಪಲಕಟ್ಟಿ ಹಾವೇರಿ ಜಿಲ್ಲೆಯ ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರವೀಣ್ಕುಮಾರ್ ರಾಣೆಬೆನ್ನೂರು ಸಂಚಾರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
ಸಾರ್ವಜನಿಕರಿಗೆ ರಕ್ಷಣೆ ನೀಡುವ ಹಾಗೂ ನೊಂದವರಿಗೆ ನ್ಯಾಯ ಕೊಡಿಸುವಂತಹ ಬಹುಮುಖ್ಯ, ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ದರೋಡೆ ಕೃತ್ಯ ಎಸಗಿದ್ದು ಘೋರ ಅಪರಾಧ. ಮೊದಲ ಆರೋಪಿ ಮಾಳಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರವೀಣ್ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಆದೇಶದಲ್ಲಿ ತಿಳಿಸಿದ್ದಾರೆ.
ನ.24ರಂದು ನಸುಕಿನಲ್ಲಿ ಕಾರವಾರದ ಆಭರಣ ತಯಾರಕ ವಿಶ್ವನಾಥ್ ಅರ್ಕಸಾಲಿ ಅವರಿಂದ ₹ 7.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಎಸ್ಐ ಸೇರಿ 7 ಆರೋಪಿಗಳನ್ನು ಕೆಟಿಜೆ ನಗರ ಠಾಣೆಯ ಪೊಲೀಸರು ನ.25ರಂದು ಬಂಧಿಸಿದ್ದರು.
In a shocking incident from Davangere, two Police Sub-Inspectors themselves allegedly robbed 78 grams of gold worth ₹7.5 lakh from a jewellery manufacturer. The victim, Vishwanath from Karwar, was targeted after local gold dealers provided the accused officers with information about his movements and even his photo.
28-11-25 10:37 pm
Bangalore Correspondent
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
ಸಿದ್ದರಾಮಯ್ಯ ಕೃತಘ್ನ ವ್ಯಕ್ತಿ, ತನ್ನ ಬೆಳೆಸಿದವರನ್ನ...
28-11-25 09:31 pm
ಸಿದ್ದರಾಮಯ್ಯ ಸಂಕಲ್ಪ ಈಡೇರುತ್ತೆ, ಡಿಕೆ ಶಿವಕುಮಾರ್...
28-11-25 07:19 pm
Koppala News, Baby: ವಸತಿ ನಿಲಯದಲ್ಲೇ ಮಗುವಿಗೆ ಜನ...
27-11-25 10:23 pm
28-11-25 10:42 pm
HK News Desk
ಗೋವಾದಲ್ಲಿ ಜಗತ್ತಿನ ಅತಿ ಎತ್ತರದ ಶ್ರೀರಾಮನ ಮೂರ್ತಿ...
28-11-25 07:28 pm
ಪಾಕಿಸ್ತಾನ ಜೈಲಿನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್...
26-11-25 07:16 pm
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
28-11-25 02:48 pm
Udupi Correspondent
Mangalore, Udupi, PM Narendra Modi, Krishna M...
28-11-25 11:29 am
ಪೊಲೀಸ್ ವಾರ್ಷಿಕ ಕ್ರೀಡಾಕೂಟ ; ನಾಗರಾಜ್ ಗೌಡ ಓಟದಲ್ಲ...
26-11-25 07:21 pm
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
28-11-25 06:23 pm
HK News Desk
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm