ಬ್ರೇಕಿಂಗ್ ನ್ಯೂಸ್
04-12-25 10:53 pm Bangalore Correspondent ಕ್ರೈಂ
ಬೆಂಗಳೂರು, ಡಿ.4 : ಇತ್ತೀಚೆಗೆ ಮೆಗಾ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಬಂಧನವಾಗಿದ್ದು ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತೆ ಮಾಡಿತ್ತು. ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನಿಂದ ಸೈಬರ್ ಠಾಣೆ ಹೆಡ್ ಕಾನ್ಸ್ಟೇಬಲ್ ಒಬ್ಬರು ಹಣ ಕಳವುಗೈದ ಬಗ್ಗೆ ಪ್ರಕರಣ ದಾಖಲಾಗಿದೆ.
ಸೈಬರ್ ಠಾಣೆಯ ಪೊಲೀಸ್ ಸಿಬಂದಿ ಜೆ.ಬಿ. ಉಲ್ಲಾ ಎಂಬವರನ್ನು 11 ಲಕ್ಷ ಕಳವು ಪ್ರಕರಣದಲ್ಲಿ ಬಂಧಿಸಲಾಗಿದೆ. ಸೈಬರ್ ಪೊಲೀಸರು ಪ್ರಕರಣ ಒಂದರಲ್ಲಿ ಆರೋಪಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಕಾರು ಸಮೇತ ಕರೆತಂದಿದ್ದು ಬಳಿಕ ಬಂಧನ ಮಾಡಲಾಗಿತ್ತು.
ಆರೋಪಿ ಬಳಿಕ ಜಾಮೀನಿನಲ್ಲಿ ಹೊರಬಂದು ಠಾಣೆಯಲ್ಲಿದ್ದ ಕಾರನ್ನು ಕರೆದೊಯ್ಯಲು ಬಂದಿದ್ದ. ಈ ವೇಳೆ ತನ್ನ ಕಾರಿನಲ್ಲಿಟ್ಟಿದ್ದ 11 ಲಕ್ಷ ರೂಪಾಯಿ ಬ್ಯಾಗ್ ನಾಪತ್ತೆಯಾಗಿತ್ತು. ತಕ್ಷಣವೇ ಸೈಬರ್ ಠಾಣೆಯ ಸಿಬ್ಬಂದಿಯವರ ಗಮನಕ್ಕೆ ತಂದಾಗ ಅಧಿಕಾರಿಗಳು ಮೊದಲಿಗೆ ಗಾಬರಿಗೊಂಡರು ಬಳಿಕ ಸಿಸಿಟಿವಿ ಪರಿಶೀಲಿಸಿದಾಗ, ಹೆಡ್ ಕಾನ್ಸ್ಟೇಬಲ್ ಜೆ.ಬಿ. ಉಲ್ಲಾ ಕಾರಿನಲ್ಲಿದ್ದ 11 ಲಕ್ಷ ರೂಪಾಯಿ ಹಣದ ಬ್ಯಾಗ್ನ್ನು ತೆಗೆದುಕೊಂಡು ಹೋಗಿರುವುದು ಕಂಡುಬಂದಿದೆ.
ಆದರೆ ಹಣ ಕದ್ದ ನಂತರ ಜೆಬಿ ಉಲ್ಲಾ ತನಗೇನೂ ಗೊತ್ತಿಲ್ಲ ಎನ್ನುವಂತಿದ್ದು ಎಂದಿನಂತೆ ಕೆಲಸಕ್ಕೆ ಬರುತ್ತಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಅವರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಜೆಬಿ ಉಲ್ಲಾ ಅವರ ಮನೆಗೆ ಸರ್ಚ್ ಮಾಡಲು ತೆರಳಿದಾಗ, ಆತ ಮನೆ ಒಳಗೆ ಬಿಡದೆ ಗಲಾಟೆ ಮಾಡಿದ್ದ.
ಪೊಲೀಸರು ಸರ್ಚ್ ಮಾಡಿದಾಗ, ಮಲಗುವ ಕೋಣೆಯ ಬೆಡ್ ಕೆಳಗೆ ಲಕ್ಷಾಂತರ ರೂ. ಹಣವನ್ನು ಜೋಡಿಸಿ ಇಟ್ಟಿದ್ದು ಪತ್ತೆಯಾಯಿತು. ಕದ್ದ ಹಣದಿಂದಲೇ ತನ್ನ ಪತ್ನಿಗೆ ಆಭರಣಗಳನ್ನು ತೆಗೆದು ಕೊಟ್ಟಿರುವುದು ಕೂಡಾ ತನಿಖೆಯಲ್ಲಿ ಬಹಿರಂಗವಾಗಿದೆ. ಕದ್ದ ಹಣದಲ್ಲಿ ಸುಮಾರು ಎರಡು ಲಕ್ಷ ರೂಪಾಯಿ ಮಾತ್ರ ವಾಪಸ್ ನೀಡಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ನಗರದ ಪೊಲೀಸರನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇತ್ತೀಚೆಗೆ ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಬಂಧಿತನಾಗಿದ್ದ. ಜೆಪಿ ನಗರದಲ್ಲಿ ಪೊಲೀಸರೇ ಸೀನಿಯರ್ ಸಿಟಿಜನ್ ಬಳಿ ಹಣ ಪಡೆದ ಆರೋಪವೂ ಕೇಳಿಬಂದಿತ್ತು. ಇದೀಗ ಸೈಬರ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಜೆಬಿ ಉಲ್ಲಾ ಮೇಲೆ ಕಳ್ಳತನದ ದೂರು ದಾಖಲಾಗಿದೆ.
In a shocking incident that has embarrassed the Bengaluru police department, a head constable from the Cyber Crime Police Station has been arrested for stealing ₹11 lakh from a car parked right outside the Bengaluru Police Commissioner’s Office.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm