ಬ್ರೇಕಿಂಗ್ ನ್ಯೂಸ್
04-12-25 11:15 pm Mangalore Correspondent ಕ್ರೈಂ
ಮಂಗಳೂರು, ಡಿ.4 : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಮಸಕಟ್ಟೆ ನಿವಾಸಿಗಳಾದ ವೃದ್ಧ ದಂಪತಿ ಡಿಜಿಟಲ್ ಅರೆಸ್ಟ್ ಜಾಲಕ್ಕೆ ಬಿದ್ದು ತಮ್ಮ ಖಾತೆಯಲ್ಲಿದ್ದ 84 ಲಕ್ಷವನ್ನು ಸೈಬರ್ ವಂಚಕರಿಗೆ ನೀಡಲು ಹೋಗಿ ಬ್ಯಾಂಕ್ ಮ್ಯಾನೇಜರ್ ಒಬ್ಬರ ಸಮಯ ಪ್ರಜ್ಞೆಯಿಂದ ಹಣ ಉಳಿಸಿಕೊಂಡಿದ್ದಾರೆ.
ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ಬೆನೆಡಿಕ್ಟ್ ಪೆರ್ನಾಂಡಿಸ್ (84) ಹಾಗೂ ಪತ್ನಿ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71) ಅವರಿಗೆ ಡಿ.1 ರಂದು ಯಾರೋ ಅಪರಿಚಿತರು ಕರೆ ಮಾಡಿ ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂದು ಪರಿಚಯ ಹೇಳಿದ್ದರು. ಬಳಿಕ ಪೊಲೀಸರ ಸೋಗಿನಲ್ಲಿ ವಾಟ್ಸ್ ಅಪ್ ಮೂಲಕ ಸಂಪರ್ಕಿಸಿ, ನೀವು 6 ಕೋಟಿ ಮೋಸ ಮಾಡಿದ್ದಾಗಿ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿದ್ದಲ್ಲದೆ, ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಹೇಳಿದ್ದಾರೆ.
ಇದಲ್ಲದೆ, ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ಆರ್ ಬಿಐಗೆ ನೀಡಬೇಕೆಂದು ಸೂಚಿಸಿದ್ದು ಇದರಂತೆ ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಬಾಬ್ತು ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ತೆರಳಿದ್ದರು. ಈ ವೇಳೆ, ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಯಾಕೆ ವರ್ಗಾವಣೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಆದರೆ ವೃದ್ಧ ದಂಪತಿ ಸರಿಯಾದ ಉತ್ತರ ನೀಡದ ಕಾರಣ ಸಂಶಯಗೊಂಡ ಮ್ಯಾನೇಜರ್, ಸೈಬರ್ ವಂಚಕರು ಒದಗಿಸಿದ ಖಾತೆಗೆ ಹಣವನ್ನು ವರ್ಗಾವಣೆ ಮಾಡದೇ, ಕಿನ್ನಿಗೋಳಿ ಪರಿಸರದ ಮುಲ್ಕಿ ಠಾಣೆಯ ಬೀಟ್ ಸಿಬ್ಬಂದಿ ಯಶವಂತ ಕುಮಾರ್ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಕಿಶೋರ್ ಅವರಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಮುಲ್ಕಿ ಪೊಲೀಸರು ವೃದ್ಧ ದಂಪತಿಯ ಮನೆಗೆ ತೆರಳಿ ಅವರ ಮೊಬೈಲ್ ಪರಿಶೀಲಿಸಿದ್ದು ಈ ಸಮಯ ಅವರು ಡಿಜಿಟಲ್ ಅರೆಸ್ಟ್ ಒಳಗಾಗಿರುವುದು ಕಂಡುಬಂದಿದೆ. ಕೂಡಲೇ ಪೊಲೀಸ್ ಸಿಬ್ಬಂದಿಗಳು ಬ್ಯಾಂಕ್ ಮ್ಯಾನೇಜರ್ ಗೆ ಕರೆ ಮಾಡಿ ವಿಚಾರ ತಿಳಿಸಿದ್ದು ಹಣ ವರ್ಗಾವಣೆ ಮಾಡದಂತೆ ಸೂಚಿಸಿದ್ದರು. ಅಲ್ಲದೆ, ವೃದ್ದ ದಂಪತಿಗೆ ತಿಳುವಳಿಕೆ ನೀಡಿ, ದೊಡ್ಡ ಮೊತ್ತದ ಹಣವನ್ನು ಉಳಿಸಿರುತ್ತಾರೆ. ಇದರ ಬಗ್ಗೆ ಮುಲ್ಕಿ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿರುತ್ತಾರೆ.
An elderly couple from Damasakatte in Mulki narrowly escaped losing ₹84 lakh to cybercriminals after falling victim to a sophisticated ‘digital arrest’ scam. The scammers, posing as CID officers from Uttar Pradesh, contacted 84-year-old Benedict Fernandes and his wife, 71-year-old Lilly Cecily, alleging their involvement in a ₹6 crore fraud case.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm