ಬ್ರೇಕಿಂಗ್ ನ್ಯೂಸ್
06-12-25 09:52 pm Mangalore Correspondent ಕ್ರೈಂ
ಮಂಗಳೂರು, ಡಿ.6 : ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದಲ್ಲಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಐವರು ಡ್ರಗ್ ಪೆಡ್ಲರ್ ಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ವರ್ಷಗಳ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಸುಡಾನ್ ಮೂಲದ ಪ್ರಜೆ, ಬೆಂಗಳೂರು ಗುಂಟೂರು ಪಾಳ್ಯದಲ್ಲಿ ನೆಲೆಸಿದ್ದ ಲೂವಾ ಡೇನಿಯಲ್ ಜಸ್ಟಿನ್ ಬೌಲೋಗೆ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಮಹಮ್ಮದ್ ರಮೀಜ್ ಗೆ 14 ವರ್ಷಗಳ ಕಠಿಣ ಶಿಕ್ಷೆ ಮತ್ತು 1.45 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಮಂಜಿಲ್ ಕುನ್ನಿಲ್ ನಿವಾಸಿ ಮೊಯಿದೀನ್ ರಶೀದ್ ಗೆ 12 ವರ್ಷಗಳ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ. ಉಪ್ಪಳ ನಿವಾಸಿ ಅಬ್ದುಲ್ ರವೂಫ್ ಗೆ 13 ವರ್ಷ ಕಠಿಣ ಶಿಕ್ಷೆ ಮತ್ತು 1.35 ಲಕ್ಷ ದಂಡ ವಿಧಿಸಿದೆ. ಇವರಿಗೆ ಸಹಕಾರ ನೀಡುತ್ತಿದ್ದ ಬೆಂಗಳೂರು ಮಡಿವಾಳ ನಿವಾಸಿ ಸಬಿತಾ ಅಲಿಯಾಸ್ ಚಿಂಚುಗೆ 12 ವರ್ಷ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ.


2022ರ ಜೂನ್ 14ರಂದು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದರು. ಈ ವೇಳೆ, 125 ಗ್ರಾಮ್ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಈ ಬಗ್ಗೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಾಗಿತ್ತು. ಒಂದೂವರೆ ವರ್ಷಗಳಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳ ಆರೋಪ ಸಾಬೀತಾಗಿದೆ ಎಂದು ಹೇಳಿದ್ದು ಇದೀಗ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ. ಎನ್ಡಿಪಿಎಸ್ ಸ್ಪೆಷಲ್ ಕೋರ್ಟಿನಲ್ಲಿ ಪೊಲೀಸರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಮಸ್ಕರೇನಸ್ ವಾದಿಸಿದ್ದರು.
The Principal District and Sessions Court in Mangaluru has sentenced five drug peddlers to 12–14 years of rigorous imprisonment along with heavy fines for supplying MDMA to students. The accused had been arrested two years ago during a crackdown by the Mangaluru CCB.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am