ಬ್ರೇಕಿಂಗ್ ನ್ಯೂಸ್
06-12-25 09:52 pm Mangalore Correspondent ಕ್ರೈಂ
ಮಂಗಳೂರು, ಡಿ.6 : ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದಲ್ಲಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಐವರು ಡ್ರಗ್ ಪೆಡ್ಲರ್ ಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ವರ್ಷಗಳ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಸುಡಾನ್ ಮೂಲದ ಪ್ರಜೆ, ಬೆಂಗಳೂರು ಗುಂಟೂರು ಪಾಳ್ಯದಲ್ಲಿ ನೆಲೆಸಿದ್ದ ಲೂವಾ ಡೇನಿಯಲ್ ಜಸ್ಟಿನ್ ಬೌಲೋಗೆ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಮಹಮ್ಮದ್ ರಮೀಜ್ ಗೆ 14 ವರ್ಷಗಳ ಕಠಿಣ ಶಿಕ್ಷೆ ಮತ್ತು 1.45 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಮಂಜಿಲ್ ಕುನ್ನಿಲ್ ನಿವಾಸಿ ಮೊಯಿದೀನ್ ರಶೀದ್ ಗೆ 12 ವರ್ಷಗಳ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ. ಉಪ್ಪಳ ನಿವಾಸಿ ಅಬ್ದುಲ್ ರವೂಫ್ ಗೆ 13 ವರ್ಷ ಕಠಿಣ ಶಿಕ್ಷೆ ಮತ್ತು 1.35 ಲಕ್ಷ ದಂಡ ವಿಧಿಸಿದೆ. ಇವರಿಗೆ ಸಹಕಾರ ನೀಡುತ್ತಿದ್ದ ಬೆಂಗಳೂರು ಮಡಿವಾಳ ನಿವಾಸಿ ಸಬಿತಾ ಅಲಿಯಾಸ್ ಚಿಂಚುಗೆ 12 ವರ್ಷ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ.


2022ರ ಜೂನ್ 14ರಂದು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದರು. ಈ ವೇಳೆ, 125 ಗ್ರಾಮ್ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಈ ಬಗ್ಗೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಾಗಿತ್ತು. ಒಂದೂವರೆ ವರ್ಷಗಳಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳ ಆರೋಪ ಸಾಬೀತಾಗಿದೆ ಎಂದು ಹೇಳಿದ್ದು ಇದೀಗ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ. ಎನ್ಡಿಪಿಎಸ್ ಸ್ಪೆಷಲ್ ಕೋರ್ಟಿನಲ್ಲಿ ಪೊಲೀಸರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಮಸ್ಕರೇನಸ್ ವಾದಿಸಿದ್ದರು.
The Principal District and Sessions Court in Mangaluru has sentenced five drug peddlers to 12–14 years of rigorous imprisonment along with heavy fines for supplying MDMA to students. The accused had been arrested two years ago during a crackdown by the Mangaluru CCB.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm