ಬ್ರೇಕಿಂಗ್ ನ್ಯೂಸ್
06-12-25 09:52 pm Mangalore Correspondent ಕ್ರೈಂ
ಮಂಗಳೂರು, ಡಿ.6 : ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದಲ್ಲಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಐವರು ಡ್ರಗ್ ಪೆಡ್ಲರ್ ಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ವರ್ಷಗಳ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಸುಡಾನ್ ಮೂಲದ ಪ್ರಜೆ, ಬೆಂಗಳೂರು ಗುಂಟೂರು ಪಾಳ್ಯದಲ್ಲಿ ನೆಲೆಸಿದ್ದ ಲೂವಾ ಡೇನಿಯಲ್ ಜಸ್ಟಿನ್ ಬೌಲೋಗೆ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಮಹಮ್ಮದ್ ರಮೀಜ್ ಗೆ 14 ವರ್ಷಗಳ ಕಠಿಣ ಶಿಕ್ಷೆ ಮತ್ತು 1.45 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಮಂಜಿಲ್ ಕುನ್ನಿಲ್ ನಿವಾಸಿ ಮೊಯಿದೀನ್ ರಶೀದ್ ಗೆ 12 ವರ್ಷಗಳ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ. ಉಪ್ಪಳ ನಿವಾಸಿ ಅಬ್ದುಲ್ ರವೂಫ್ ಗೆ 13 ವರ್ಷ ಕಠಿಣ ಶಿಕ್ಷೆ ಮತ್ತು 1.35 ಲಕ್ಷ ದಂಡ ವಿಧಿಸಿದೆ. ಇವರಿಗೆ ಸಹಕಾರ ನೀಡುತ್ತಿದ್ದ ಬೆಂಗಳೂರು ಮಡಿವಾಳ ನಿವಾಸಿ ಸಬಿತಾ ಅಲಿಯಾಸ್ ಚಿಂಚುಗೆ 12 ವರ್ಷ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ.


2022ರ ಜೂನ್ 14ರಂದು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದರು. ಈ ವೇಳೆ, 125 ಗ್ರಾಮ್ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಈ ಬಗ್ಗೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಾಗಿತ್ತು. ಒಂದೂವರೆ ವರ್ಷಗಳಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳ ಆರೋಪ ಸಾಬೀತಾಗಿದೆ ಎಂದು ಹೇಳಿದ್ದು ಇದೀಗ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ. ಎನ್ಡಿಪಿಎಸ್ ಸ್ಪೆಷಲ್ ಕೋರ್ಟಿನಲ್ಲಿ ಪೊಲೀಸರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಮಸ್ಕರೇನಸ್ ವಾದಿಸಿದ್ದರು.
The Principal District and Sessions Court in Mangaluru has sentenced five drug peddlers to 12–14 years of rigorous imprisonment along with heavy fines for supplying MDMA to students. The accused had been arrested two years ago during a crackdown by the Mangaluru CCB.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm