ಬ್ರೇಕಿಂಗ್ ನ್ಯೂಸ್
09-12-25 11:58 am Mangalore Correspondent ಕ್ರೈಂ
ಮಂಗಳೂರು, ಡಿ.9 : ಹೋಮಿಯೋಪತಿ ಓದುತ್ತಿದ್ದ ಯುವಕನಿಗೆ ವಾಟ್ಸಾಪ್ನಲ್ಲಿ ಷೇರು ಹೂಡಿಕೆಯಿಂದ ಹೆಚ್ಚು ಲಾಭ ಗಳಿಸಬಹುದು ಎನ್ನುವ ಆಮಿಷವೊಡ್ಡಿ 31.99 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ವಿದ್ಯಾರ್ಥಿ, ಬಿಡುವಿನ ವೇಳೆಯಲ್ಲಿ ಪುರೋಹಿತರ ಸಹಾಯಕನಾಗಿ ಪೂಜೆ, ಹೋಮ ಹವನ ಮತ್ತು ಇನ್ನಿತರ ಕೆಲಸಕ್ಕೆ ಹೋಗುತ್ತಿದ್ದ. ಅದರ ಆದಾಯದ ಉಳಿತಾಯದ ಹಣವನ್ನು ಬ್ಯಾಂಕ್ನಲ್ಲಿ ಇರಿಸಿದ್ದ. ನವೆಂಬರ್ ತಿಂಗಳಲ್ಲಿ ವಾಟ್ಸಾಪ್ನಲ್ಲಿ ಸಂದೇಶ ಬಂದಿದ್ದು ಅದರಲ್ಲಿ ಡಿಬಿಎಸ್ ಟ್ರೇಡಿಂಗ್ ಬಗ್ಗೆ ವಿವರಿಸಿ ಹಣ ಹೂಡಿಕೆ ಮಾಡಿದರೆ ಪ್ರತಿದಿನ ಶೇ.5 ರಿಂದ 10ರಷ್ಟು ಲಾಭಾಂಶ ಗಳಿಸಹುದು ಎಂದು ತಿಳಿಸಲಾಗಿತ್ತು. ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಡಿಸೆಂಬರ್ ಅಂತ್ಯದೊಳಗೆ ಶೇ. 800 ರಷ್ಟು ಲಾಭಾಂಶ ನೀಡುವುದಾಗಿ ಭರವಸೆ ನೀಡಿದ್ದರು. ಇದರಿಂದ ಪ್ರೇರೇಪಿತರಾಗಿ ಅಪರಿಚಿತ ವ್ಯಕ್ತಿಗಳು ತಿಳಿಸಿದಂತೆ ಹಣ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಚಿನ್ನ ಅಡವಿಟ್ಟು 31 ಲಕ್ಷ ರೂ. ಹೂಡಿಕೆ
ಮೀನಾ ಭಟ್ ಎನ್ನುವ ಅಪರಿಚಿತ ಮಹಿಳೆ ಮಾರ್ಗದರ್ಶಕಿಯಾಗಿ ಪ್ರತಿದಿನ ನಿರಂತರವಾಗಿ ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸುತ್ತಾ ಹಣ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದಳು. ಅವರು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರವನ್ನು ಅಡವಿಟ್ಟು ಹಂತ ಹಂತ ವಾಗಿ ಒಟ್ಟು 31,99,800 ರೂ. ಹಣ ವರ್ಗಾಯಿಸಿದ್ದಾರೆ.
ಅನಂತರದ ದಿನಗಳಲ್ಲಿ ಹೂಡಿಕೆ ಮಾಡಿದ ಹಣವನ್ನು ವಾಪಸ್ ನೀಡುವಂತೆ ಕೇಳಿಕೊಂಡಾಗ ಇನ್ನೂ ಹೆಚ್ಚಿನ ಹಣ ತೊಡಗಿಸುವಂತೆ ಹಾಗೂ ತೆರಿಗೆ ಇತರೆ ಶುಲ್ಕಗಳನ್ನು ಪಾವತಿಸಬೇಕು. ಇಲ್ಲವಾದಲ್ಲಿ ಯಾವುದೇ ಹಣ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮಹಿಳೆ ತಿಳಿಸಿದ್ದಾರೆ. ಇದರಿಂದ ಭಯಪಟ್ಟು ಮನೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಿದಾಗ ತಾನು ಮೋಸ ಹೋಗಿರುವ ವಿಚಾರ ಬೆಳಕಿಗೆ ಬಂದಿದೆ. ಹಣವನ್ನು ಮೋಸದಿಂದ ವರ್ಗಾಯಿಸಿ ವಂಚಿಸಿರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
A homoeopathy student from Mangaluru, who also worked part-time as a purohit assistant, was cheated of ₹31.99 lakh after being lured into investing in a fake online share-trading platform via WhatsApp. A case has been registered at Mangaluru South Police Station (Sen Police Station).
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
09-12-25 11:55 am
Udupi Correspondent
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
09-12-25 11:58 am
Mangalore Correspondent
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm