ಬ್ರೇಕಿಂಗ್ ನ್ಯೂಸ್
09-12-25 04:33 pm Mangalore Correspondent ಕ್ರೈಂ
ಪುತ್ತೂರು, ಡಿ.9 : ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಚೀಲ ಕಾಫಿಯನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರು ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ಡಿ.3ರಂದು ಪಿರಿಯಾಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ಮನೆಗೆ ತೆರಳಿದ್ದರು. ಮರುದಿನ ಡಿ.04ರಂದು ಬೆಳಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.




ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡುಬಂದಿತ್ತು. ಈ ಬಗ್ಗೆ ತೃತೇಶ್ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿ ಆಶ್ಲೇಷ ಭಟ್ ಎಂಬಾತ ತನ್ನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ, ವಿಜಯ ಶೆಟ್ಟಿ ಮತ್ತು ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋವನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.
A major theft took place in Puttur where 80 bags of coffee worth ₹21.44 lakh were stolen from a lorry parked overnight. The Puttur Police have arrested five accused and recovered the stolen bags along with the vehicles used in the crime.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm