ಬ್ರೇಕಿಂಗ್ ನ್ಯೂಸ್
10-12-25 10:14 pm Udupi Correspondent ಕ್ರೈಂ
ಉಡುಪಿ, ಡಿ.10: ಕಳೆದ ವರ್ಷ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಸಜೆ ಮತ್ತು 10,000 ರೂ. ದಂಡ ವಿಧಿಸಿದೆ.
ಆರೋಪಿಗಳು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ದಾಖಲೆಗಳನ್ನು ಸೃಷ್ಟಿಸಿ, ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು. ಅವರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು ಅವರ ವಿರುದ್ದ ಕಲಂ 336(2), 336(3), 340(2), 319(2), 318(4) ಜೊತೆಗೆ 3(5) BNS ಮತ್ತು 14(A) ವಿದೇಶೀಗರ ಕಾಯ್ದೆ, ಕಲಂ:34, 42 ಆಧಾರ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಅಕ್ರಮವಾಗಿ ಉಡುಪಿಗೆ ಬಂದ ಆರೋಪಿಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ., ಇಸ್ಮಾಯಿಲ್ ಎಸ್.ಕೆ., ಕರೀಮ್ ಎಸ್.ಕೆ, ಸಲಾಂ ಎಸ್.ಕೆ, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್, ರಿಮೂಲ್, ಮೊಹಮ್ಮದ್ ಇಮಾಮ್ ಶೇಖ್ ಹಾಗೂ ಮೊಹಮ್ಮದ್ ಜಹಾಂಗಿರ್ ಆಲಂ ವಿರುದ್ದ ಪೊಲೀಸರು ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಡಿಸೆಂಬರ್ 8ರಂದು 10 ಮಂದಿ ಆರೋಪಿಗಳಿಗೆ ಎರಡು ವರ್ಷಗಳ ಕಾಲ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಿ ಆದೇಶಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
A local court has sentenced ten Bangladeshi nationals to two years imprisonment and imposed a fine of ₹10,000 each after they were arrested last year for illegally residing in Malpe.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm