ಬ್ರೇಕಿಂಗ್ ನ್ಯೂಸ್
11-12-25 07:49 pm Bangalore Correspondent ಕ್ರೈಂ
ಬೆಂಗಳೂರು, ಡಿ 11 : ವಂಚಕರ ಬೆದರಿಕೆಗೆ ಬೇಸತ್ತ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ಮೋಹನ್ (25) ಮೃತ ವಿದ್ಯಾರ್ಥಿ.
ನಗರದ ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಜಗನ್ಮೋಹನ್ ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ಬಾಡಿಗೆ ರೂಮ್ನಲ್ಲಿ ವಾಸವಿದ್ದ.
ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಮೂರು ನಂಬರ್ಗಳನ್ನು ಬರೆದಿರುವುದು ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ನಕಲಿ ವಿಡಿಯೋ ಕಾಲ್ನಲ್ಲಿ 25 ಸಾವಿರ ರೂಪಾಯಿ ಹಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಯುವಕನ ಫೋಟೋ ನಗ್ನವಾಗಿ ಎಡಿಟ್ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಡದಿದ್ದರೆ ವಿಡಿಯೋ, ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ವಂಚಕರ ಬೆದರಿಕೆಗೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
A 25-year-old MBA student died by suicide in Shantinagar near Hesaraghatta Road after allegedly being blackmailed by online fraudsters who threatened to leak his intimate photos. The deceased has been identified as Jagan Mohan, a native of Kerala.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm