ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm