ಬ್ರೇಕಿಂಗ್ ನ್ಯೂಸ್
21-12-25 08:55 pm HK News Desk ಕ್ರೈಂ
ಮಂಗಳೂರು, ಡಿ.21: ನಗರದಲ್ಲಿ 51 ವರ್ಷದ ಬ್ಯಾಂಕ್ ಗ್ರಾಹಕರೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದು, ವಂಚಕರಿಗೆ 6 ಲಕ್ಷ ರೂಪಾಯಿ ವರ್ಗಾವಣೆಗೆ ಪ್ರಯತ್ನ ಪಡುತ್ತಿದ್ದಾಗಲೇ ಬ್ಯಾಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಸೈಬರ್ ವಂಚನೆಯ ಸುಳಿವು ಪಡೆದು ಹಣ ವರ್ಗಾವಣೆಯಾಗದಂತೆ ತಡೆದಿದ್ದಾರೆ.
ಎರಡು ಮೂರು ದಿನಗಳಿಂದ ಕೆಲವು ಖಾತೆಗಳಿಗೆ ಹಣ ಠೇವಣಿ ಮಾಡಲು ಬರುತ್ತಿದ್ದ ಗ್ರಾಹಕನ ಬಗ್ಗೆ ನಗರದ ಕೆನರಾ ಬ್ಯಾಂಕ್ ಅಧಿಕಾರಿಗಳು ಗಮನಿಸಿ, ಸೆನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರಾಹಕನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆ ವ್ಯಕ್ತಿಯನ್ನು ವಿಚಾರಿಸಿದಾಗ ಸೈಬರ್ ವಂಚನೆಗೆ ಒಳಪಟ್ಟು ಅಂದಾಜು 22 ಲಕ್ಷ ರೂ.ಗಳಿಗೂ ಅಧಿಕ ಹಣ ಕಳೆದುಕೊಂಡಿರುವುದು ಕಂಡುಬಂದಿತ್ತು. ಶನಿವಾರ ಮತ್ತೆ ಸುಮಾರು 6 ಲಕ್ಷ ರೂ.ಗಳನ್ನು ಠೇವಣಿ ಮಾಡಲು ಬ್ಯಾಂಕ್ ಶಾಖೆಗೆ ಸಂತ್ರಸ್ತ ವ್ಯಕ್ತಿ ಭೇಟಿ ನೀಡಿದ್ದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಣ ಠೇವಣಿ ಮಾಡದಂತೆ ಸಂತ್ರಸ್ತ ಗ್ರಾಹಕನಿಗೆ ಜಾಗೃತಿ ಮೂಡಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿ, ನಾವು ಇತ್ತೀಚೆಗೆ ಬ್ಯಾಂಕರ್ ಗಳ ಸಭೆಯನ್ನು ಕರೆದು, ಸಂಭಾವ್ಯ ಸೈಬರ್ ವಂಚನೆಗಳನ್ನು ಗುರುತಿಸಲು ಮತ್ತು ಗ್ರಾಹಕರನ್ನು ರಕ್ಷಿಸಲು ತಮ್ಮ ಬ್ಯಾಂಕ್ಗಳಲ್ಲಿ ಗ್ರಾಹಕರಿಂದ ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ನಿಗಾ ಇರಿಸುವಂತೆ ಕೇಳಿಕೊಂಡಿದ್ದೆವು. ಅದರಂತೆ ಕೆನರಾ ಬ್ಯಾಂಕ್ನ ಅಧಿಕಾರಿಗಳು ಅನುಮಾನದಲ್ಲಿ ಮಾಹಿತಿ ನೀಡಿದ್ದು ಸೈಬರ್ ವಂಚನೆಗೆ ಒಳಗಾಗಿದ್ದ ಗ್ರಾಹಕರೊಬ್ಬರು ಮತ್ತಷ್ಟು ಹಣ ಕಳಕೊಳ್ಳುವುದರಿಂದ ರಕ್ಷಿಸಲಾಗಿದೆ. ಪ್ರಕರಣದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದಿದ್ದಾರೆ.
A 51-year-old bank customer in the city narrowly escaped losing another ₹6 lakh to cyber fraudsters, thanks to the alertness of Canara Bank staff who informed the police after noticing suspicious transactions.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am