ಬ್ರೇಕಿಂಗ್ ನ್ಯೂಸ್
21-12-25 08:55 pm HK News Desk ಕ್ರೈಂ
ಮಂಗಳೂರು, ಡಿ.21: ನಗರದಲ್ಲಿ 51 ವರ್ಷದ ಬ್ಯಾಂಕ್ ಗ್ರಾಹಕರೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದು, ವಂಚಕರಿಗೆ 6 ಲಕ್ಷ ರೂಪಾಯಿ ವರ್ಗಾವಣೆಗೆ ಪ್ರಯತ್ನ ಪಡುತ್ತಿದ್ದಾಗಲೇ ಬ್ಯಾಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಸೈಬರ್ ವಂಚನೆಯ ಸುಳಿವು ಪಡೆದು ಹಣ ವರ್ಗಾವಣೆಯಾಗದಂತೆ ತಡೆದಿದ್ದಾರೆ.
ಎರಡು ಮೂರು ದಿನಗಳಿಂದ ಕೆಲವು ಖಾತೆಗಳಿಗೆ ಹಣ ಠೇವಣಿ ಮಾಡಲು ಬರುತ್ತಿದ್ದ ಗ್ರಾಹಕನ ಬಗ್ಗೆ ನಗರದ ಕೆನರಾ ಬ್ಯಾಂಕ್ ಅಧಿಕಾರಿಗಳು ಗಮನಿಸಿ, ಸೆನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರಾಹಕನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆ ವ್ಯಕ್ತಿಯನ್ನು ವಿಚಾರಿಸಿದಾಗ ಸೈಬರ್ ವಂಚನೆಗೆ ಒಳಪಟ್ಟು ಅಂದಾಜು 22 ಲಕ್ಷ ರೂ.ಗಳಿಗೂ ಅಧಿಕ ಹಣ ಕಳೆದುಕೊಂಡಿರುವುದು ಕಂಡುಬಂದಿತ್ತು. ಶನಿವಾರ ಮತ್ತೆ ಸುಮಾರು 6 ಲಕ್ಷ ರೂ.ಗಳನ್ನು ಠೇವಣಿ ಮಾಡಲು ಬ್ಯಾಂಕ್ ಶಾಖೆಗೆ ಸಂತ್ರಸ್ತ ವ್ಯಕ್ತಿ ಭೇಟಿ ನೀಡಿದ್ದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಣ ಠೇವಣಿ ಮಾಡದಂತೆ ಸಂತ್ರಸ್ತ ಗ್ರಾಹಕನಿಗೆ ಜಾಗೃತಿ ಮೂಡಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿ, ನಾವು ಇತ್ತೀಚೆಗೆ ಬ್ಯಾಂಕರ್ ಗಳ ಸಭೆಯನ್ನು ಕರೆದು, ಸಂಭಾವ್ಯ ಸೈಬರ್ ವಂಚನೆಗಳನ್ನು ಗುರುತಿಸಲು ಮತ್ತು ಗ್ರಾಹಕರನ್ನು ರಕ್ಷಿಸಲು ತಮ್ಮ ಬ್ಯಾಂಕ್ಗಳಲ್ಲಿ ಗ್ರಾಹಕರಿಂದ ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ನಿಗಾ ಇರಿಸುವಂತೆ ಕೇಳಿಕೊಂಡಿದ್ದೆವು. ಅದರಂತೆ ಕೆನರಾ ಬ್ಯಾಂಕ್ನ ಅಧಿಕಾರಿಗಳು ಅನುಮಾನದಲ್ಲಿ ಮಾಹಿತಿ ನೀಡಿದ್ದು ಸೈಬರ್ ವಂಚನೆಗೆ ಒಳಗಾಗಿದ್ದ ಗ್ರಾಹಕರೊಬ್ಬರು ಮತ್ತಷ್ಟು ಹಣ ಕಳಕೊಳ್ಳುವುದರಿಂದ ರಕ್ಷಿಸಲಾಗಿದೆ. ಪ್ರಕರಣದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದಿದ್ದಾರೆ.
A 51-year-old bank customer in the city narrowly escaped losing another ₹6 lakh to cyber fraudsters, thanks to the alertness of Canara Bank staff who informed the police after noticing suspicious transactions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am