ಬ್ರೇಕಿಂಗ್ ನ್ಯೂಸ್
21-12-25 09:36 pm Mangalore Correspondent ಕ್ರೈಂ
ಮಂಗಳೂರು, ಡಿ.21 : ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡ ಕಟ್ಟುವಂತೆ ಮೊಬೈಲಿಗೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿರುವ ಬಗ್ಗೆ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರಿಗೆ ಡಿ.4ರಂದು ಮೊಬೈಲ್ ಸಂದೇಶ ಬಂದಿದ್ದು, ಅದನ್ನು ನಂಬಿ ಆರ್ಟಿಒ ಹೆಸರಿನಲ್ಲಿದ್ದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ್ದಾರೆ. ಬಳಿಕ ಅದು ವಂಚನಾ ಜಾಲದ ಲಿಂಕ್ ಎಂದು ತಿಳಿದು ಅದೇ ದಿನ ಡಿಲೀಟ್ ಮಾಡಿದ್ದಾರೆ. ಆದರೆ ಡಿ.16ರಂದು ಅವರ ಖಾತೆಯಿಂದ 99 ಸಾವಿರ ಹಾಗೂ 44 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ಬ್ಯಾಂಕ್ ಸಿಬಂದಿ ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೋವಾಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿ.3ರಂದು ಸಂಜೆ ಅವರ ವಾಟ್ಸ್ ಆ್ಯಪ್ ಗೆ ಅಪರಿಚಿತ ಸಂಖ್ಯೆಯಿಂದ ಆರ್ ಟಿಓ ದಂಡ ಇರುವ ಬಗ್ಗೆ ಮೆಸೇಜ್ ಬಂದಿದೆ. ಅದರಲ್ಲಿ ಎಪಿಕೆ ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಚಲನ್ ಹಣ ಪಾವತಿ ಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಫೋಟೊ, ವಿಡಿಯೋ ನೋಡಲು ಮೆಸೇಜ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಅದನ್ನು ಡೌನ್ ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲಿಗೆ ಹಲವು ಓಟಿಪಿಗಳು ಬಂದಿವೆ. ಈ ಎಲ್ಲ ಓಟಿಪಿಗಳು ಅಪರಿಚಿತ ನಂಬರ್ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿದ್ದವು. ಇದೇ ವೇಳೆ ಅವರ ಕ್ರೆಡಿಟ್ ಕಾರ್ಡ್ಗಳಿಂದ ಒಟ್ಟು 5,85,084 ರೂ.ವನ್ನು ಸೈಬರ್ ವಂಚಕರು ಶಾಪಿಂಗ್ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಿದ್ದಾರೆ. ಮಂಗಳೂರಿಗೆ ಬಂದ ಬಳಿಕ ಅವರಿಗೆ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದುಬಂದಿದ್ದು ಆ್ಯಪ್ ಡಿಲೀಟ್ ಮಾಡಿ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
Cyber fraudsters have cheated two city residents of ₹1.43 lakh and ₹5.85 lakh in separate incidents after tricking them into downloading malicious APK files sent under the guise of traffic fine notices. Cases have been registered at the Surathkal and Pandeshwar police stations.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am