ಬ್ರೇಕಿಂಗ್ ನ್ಯೂಸ್
26-12-25 10:44 pm Bangalore Correspondent ಕ್ರೈಂ
ಬೆಂಗಳೂರು, ಡಿ.26 : ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಬೇಸತ್ತು ನವವಿವಾಹಿತ ತರುಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲದ ಪೀಣ್ಯ ಮೂಲದ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಪ್ರಕರಣ ಸಂಬಂಧಿಸಿ ಆಕೆಯ ಪತಿ ಲಿಖಿತ್ ಸಿಂಹ, ಗಂಡನ ಸಹೋದರ ವರುಣ್ ಸಿಂಹ, ತಾಯಿ ಅರುಣಾ ಸಿಂಹರನ್ನು ಬಂಧಿಸಲಾಗಿದೆ.
ಐಶ್ವರ್ಯಾ ಬುಧವಾರ ಸಂಜೆ ತನ್ನ ಮನೆಯಲ್ಲೇ ಅನುಮಾನಾಸ್ಪದ ರೀತಿ ಮೃತಪಟ್ಟಿದ್ದಾರೆ. ಐಶ್ವರ್ಯ ತಂದೆ ಕೃಷ್ಣ ವರದಕ್ಷಿಣೆ ಹಾಗೂ ಹಲ್ಲೆ ಆರೋಪದಡಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯ ಎಂಬಿಎ ವ್ಯಾಸಂಗ ಮಾಡಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹನನ್ನು ಅಕ್ಟೋಬರ್ 26ರಂದು ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲೇ ಹೆಚ್ಚಿನ ಚಿನ್ನಾಭರಣಕ್ಕೆ ಬೇಡಿಕೆ ಇಟ್ಟಿದ್ದರು. ಮದುವೆಗೆ 18 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ, ಮದುವೆಯಾದ 15 ದಿನಕ್ಕೆ ಪತಿ ಮತ್ತು ಆತನ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ, ಆಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಿಂದ ಬೇಸತ್ತ ಆಕೆ ತವರು ಮನೆಗೆ ಹೋಗಿ, ಪೋಷಕರ ಬಳಿ ಹೇಳಿಕೊಂಡಿದ್ದರು.

ಬಳಿಕ ಡಿ.24ರಂದು ಬೆಳಗ್ಗೆ ಆಕೆಯ ಪೋಷಕರು ಗಂಡನ ಮನೆಗೆ ಬಂದು ರಾಜಿ ಸಂಧಾನ ಮಾಡಿ ಹೋಗಿದ್ದರು. ಲಿಖಿತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾಗೆ ಕಿರುಕುಳ ಕೊಡುತ್ತಿದ್ದರು. ಲಿಖಿತ್, ಪತ್ನಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ನಿಂದಿಸುತ್ತಿದ್ದರು. ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಲಿಖಿತ್ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು. ಆದರೆ, ಅದೇ ದಿನ ರಾತ್ರಿ 8 ಗಂಟೆ ಸುಮಾರಿಗೆ ಲಿಖಿತ್ ಕರೆ ಮಾಡಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾಗಿ ಯುವತಿ ಪೋಷಕರು ಆರೋಪಿಸಿದ್ದಾರೆ.
A 26-year-old newly married woman, Aishwarya from Nagamangala’s Peenya area, died by suicide at her husband’s residence in Bagalagunte, Bengaluru, allegedly due to dowry harassment and domestic abuse. Police have arrested her husband Likhith Singh, his brother Varun Singh, and their mother Aruna Singh following a complaint from Aishwarya’s father, Krishna.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm