ಬ್ರೇಕಿಂಗ್ ನ್ಯೂಸ್
31-12-25 07:05 pm Udupi Correspondent ಕ್ರೈಂ
ಉಡುಪಿ, ಡಿ.31 : ವಿದ್ಯಾರ್ಥಿಯೊಬ್ಬ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ಕೋಲಾರ ಮೂಲದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಓಂ ಕೋಲಾರ ಎಂಬಾತ ಆರೋಪಿಯಾಗಿದ್ದು ವಿಚಾರಣೆ ನಡೆಸಿದಾಗ ಅಂತರ್ ಜಿಲ್ಲಾ ಬೈಕ್ ಕಳ್ಳ ಎಂಬುದು ತಿಳಿದುಬಂದಿದೆ. ಬಂಧಿತನಿಂದ ಬೇರೆ ಬೇರೆ ಕಡೆಗಳಲ್ಲಿ ಕದ್ದಿರುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಲಾಗಿದೆ.
ಡಿಸೆಂಬರ್ 5 ರಂದು ವಿದ್ಯಾರ್ಥಿ ಕೌಶಿಕ್ ಎಂಬಾತ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ. ಮಧ್ಯಾಹ್ನ ವೇಳೆ ಸ್ಕೂಟರ್ ನಿಲ್ಲಿಸಿ ಊಟ ಮುಗಿಸಿ ಬಂದಾಗ ಸ್ಕೂಟರ್ ಕಳವಾಗಿತ್ತು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೊಲೀಸರು ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಉಡುಪಿ, ಮಲ್ಪೆ, ಕಾರ್ಕಳ ಹಾಗೂ ಧರ್ಮಸ್ಥಳ ಸೇರಿದಂತೆ ವಿವಿಧ ಭಾಗಗಳಲ್ಲಿ ಜಾಲ ಬೀಸಿದ್ದ ತಂಡವು ಕೊನೆಗೆ ಓಂ ಕೋಲಾರ ಎಂಬ ಆರೋಪಿಯನ್ನು ಬಂಧಿಸಿದೆ. ತೀವ್ರ ವಿಚಾರಣೆಗೆ ಒಳಪಡಿಸಿದಾಗ ಶಿರ್ವ ಮಾತ್ರವಲ್ಲದೆ, ಕಾಪು ಮತ್ತು ಬೆಂಗಳೂರು ನಗರದ ವಿವಿಧೆಡೆ ಬೈಕ್ ಕಳವು ಮಾಡಿರುವುದು ಪತ್ತೆಯಾಗಿದೆ. ಬಂಧಿತನಿಂದ ಶಿರ್ವ ಠಾಣೆಗೆ ಸಂಬಂಧಿಸಿದ ಒಂದು ಬೈಕ್ ಹಾಗೂ ಕಾಪು ಮತ್ತು ಬೆಂಗಳೂರಿನಲ್ಲಿ ಕಳವು ಮಾಡಿದ್ದ ನಾಲ್ಕು ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Shirva Police have arrested an inter-district bike thief from Kolar in connection with the theft of a scooter belonging to a student. The accused, identified as Om Kolar, was taken into custody, and investigation revealed that he was involved in multiple two-wheeler thefts across different districts. Police have recovered five stolen bikes from him.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm