ಬ್ರೇಕಿಂಗ್ ನ್ಯೂಸ್
31-12-25 07:05 pm Mangalore Correspondent ಕ್ರೈಂ
ಪುತ್ತೂರು, ಡಿ.31 : ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ ಈ ಬಗ್ಗೆ ಕೊಲೆ ಪ್ರಕರಣ ದಾಖಲಾಗಿತ್ತು. ಮಹಿಳೆಯ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು ಅಕ್ಟೋಬರ್ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಮನೆಗೆ ಕಳುಹಿಸಿದ್ದರು. ಮರುದಿನ 17ರಂದು ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಅಬ್ದುಲ್ ಜಬ್ಬಾರ್ ಸಾವಿಗೆ ರಫೀಕ್ ಪಡು ಮತ್ತು ಇತರರು ಹಲ್ಲೆ ನಡೆಸಿದ್ದೇ ಕಾರಣ ಎಂಬುದಾಗಿ ಸುಮಯ್ಯಾ ಅವರು ಅ.18ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದ್ದರಿಂದ ಸದ್ರಿ ಪ್ರಕರಣವನ್ನು ಕಲಂ: 103 ಜೊತೆಗೆ 3(5) BNS ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯಾದ ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಎಂಬಾತನನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿದ್ದು, ಇನ್ನೋರ್ವ ಆರೋಪಿ ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ @ ಮನು (42) ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Two persons have been arrested by the Sullia Police in connection with the death of a man who was allegedly taken out on the pretext of renting a car, assaulted brutally, and later died due to the injuries sustained.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm