ಬ್ರೇಕಿಂಗ್ ನ್ಯೂಸ್
02-01-26 12:32 pm HK News Desk ಕ್ರೈಂ
ಕಾರವಾರ, ಜ.2 : ಮುಂಬೈ ಪೊಲೀಸ್ ಇನ್ಸ್ಪೆಕ್ಟರ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿದ ಸೈಬರ್ ವಂಚಕರು, ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ಉಗ್ರಗಾಮಿಗಳ ಸಂಪರ್ಕ ಇರುವುದಾಗಿ ಬೆದರಿಸಿ ಬರೋಬ್ಬರಿ 1.61 ಕೋಟಿ ರೂ. ಪಂಗನಾಮ ಹಾಕಿದ್ದಾರೆ.
ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ, 72 ವರ್ಷದ ಪಾಲ್ಡೆನ್ ವಂಚನೆಗೆ ಒಳಗಾದವರು. ವಾಟ್ಸಪ್ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಮಹಾರಾಷ್ಟ್ರದ ಕೋಲಾಬಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂದು ಪರಿಚಯ ಹೇಳಿದ್ದ. ಬಳಿಕ ಮುಂಬೈನಲ್ಲಿ ಅರೆಸ್ಟ್ ಆಗಿರುವ ಉಗ್ರಗಾಮಿ ಸಂಘಟನೆಯ ನಾಯಕನ ಬಳಿ ಪತ್ತೆಯಾದ ನೂರಾರು ಎಟಿಎಂ ಕಾರ್ಡ್ಗಳಲ್ಲಿ ನಿಮ್ಮ ಹೆಸರಿನ ಕಾರ್ಡ್ ಇದೆ ಎಂದು ಹೆದರಿಸಿದ್ದು, ನಿಮ್ಮ ಖಾತೆಯಿಂದ ಕೋಟಿಗಟ್ಟಲೆ ಹಣ ವರ್ಗಾವಣೆಯಾಗಿದ್ದು, ನಿಮ್ಮ ಮೇಲೆ ಮನಿ ಲಾಂಡ್ರಿಂಗ್ ಪ್ರಕರಣ ದಾಖಲಾಗಿದೆ ಎಂದು ನಂಬಿಸಿದ್ದ.
ಪೊಲೀಸ್ ಡ್ರೆಸ್ನಲ್ಲಿ ವಿಡಿಯೋ ಕರೆ
ವಂಚಕ ವ್ಯಕ್ತಿ ಪೊಲೀಸರ ಸಮವಸ್ತ್ರ ಧರಿಸಿ ವಿಡಿಯೋ ಕರೆ ಮಾಡಿದ್ದು ವೃದ್ಧ ಶಿಕ್ಷಕನನ್ನು ನಂಬಿಕೆ ಬರುವಂತೆ ಮಾಡಿದ್ದ. ಅಲ್ಲದೆ, ನಕಲಿ ಬ್ಯಾಂಕ್ ಸ್ಟೇಟ್ಮೆಂಟ್ ಕಳುಹಿಸಿ, ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲ ಹಣವನ್ನು 'ನ್ಯಾಷನಲ್ ಫಂಡ್'ಗೆ ಜಮಾ ಮಾಡಬೇಕು, ತನಿಖೆ ಮುಗಿದ ಮೇಲೆ ಹಣ ವಾಪಸ್ ನೀಡಲಾಗುವುದು ಎಂದು ನಂಬಿಸಿದ್ದ. ಈ ಬಗ್ಗೆ ಯಾರ ಬಳಿಯೂ ತಿಳಿಸದಂತೆ ಬೆದರಿಸಿದ್ದು, ನೀವು ಡಿಜಿಟಲ್ ಅರೆಸ್ಟ್ ನಲ್ಲಿದ್ದೀರಿ, ಪ್ರತಿ ಎರಡು ಗಂಟೆಗೊಮ್ಮೆ ವಾಟ್ಸಪ್ ಮೂಲಕ ವರದಿ ನೀಡುವಂತೆ ಸೂಚಿಸಿದ್ದ.
ಸಾಲ ಮಾಡಿ ಹಣ ಕೊಟ್ಟ ನಿವೃತ್ತ ಶಿಕ್ಷಕ
ವಂಚಕನ ಮಾತನ್ನು ನಂಬಿದ ಪಾಲ್ಡೆನ್ ತಮ್ಮ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಎಫ್ಡಿ ಹಣ ಹಾಗೂ ಸಂಬಂಧಿಕರಿಂದ ಸಾಲ ಪಡೆದು ಸುಮಾರು 1.61 ಕೋಟಿ ರೂಪಾಯಿಯನ್ನು ಹಂತ ಹಂತವಾಗಿ ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಕೊನೆಗೆ, ಹಾಕಿದ ಹಣ ಹಿಂತಿರುಗಿಸದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು ಕಾರವಾರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a shocking case of cybercrime, fraudsters posing as Mumbai Police officers extorted ₹1.61 crore from a 72-year-old retired teacher from the Tibetan Colony in Mundgod by falsely claiming he was linked to terrorists and under “digital arrest.”
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am