ಬ್ರೇಕಿಂಗ್ ನ್ಯೂಸ್
02-01-26 12:32 pm HK News Desk ಕ್ರೈಂ
ಕಾರವಾರ, ಜ.2 : ಮುಂಬೈ ಪೊಲೀಸ್ ಇನ್ಸ್ಪೆಕ್ಟರ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿದ ಸೈಬರ್ ವಂಚಕರು, ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ಉಗ್ರಗಾಮಿಗಳ ಸಂಪರ್ಕ ಇರುವುದಾಗಿ ಬೆದರಿಸಿ ಬರೋಬ್ಬರಿ 1.61 ಕೋಟಿ ರೂ. ಪಂಗನಾಮ ಹಾಕಿದ್ದಾರೆ.
ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ, 72 ವರ್ಷದ ಪಾಲ್ಡೆನ್ ವಂಚನೆಗೆ ಒಳಗಾದವರು. ವಾಟ್ಸಪ್ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಮಹಾರಾಷ್ಟ್ರದ ಕೋಲಾಬಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂದು ಪರಿಚಯ ಹೇಳಿದ್ದ. ಬಳಿಕ ಮುಂಬೈನಲ್ಲಿ ಅರೆಸ್ಟ್ ಆಗಿರುವ ಉಗ್ರಗಾಮಿ ಸಂಘಟನೆಯ ನಾಯಕನ ಬಳಿ ಪತ್ತೆಯಾದ ನೂರಾರು ಎಟಿಎಂ ಕಾರ್ಡ್ಗಳಲ್ಲಿ ನಿಮ್ಮ ಹೆಸರಿನ ಕಾರ್ಡ್ ಇದೆ ಎಂದು ಹೆದರಿಸಿದ್ದು, ನಿಮ್ಮ ಖಾತೆಯಿಂದ ಕೋಟಿಗಟ್ಟಲೆ ಹಣ ವರ್ಗಾವಣೆಯಾಗಿದ್ದು, ನಿಮ್ಮ ಮೇಲೆ ಮನಿ ಲಾಂಡ್ರಿಂಗ್ ಪ್ರಕರಣ ದಾಖಲಾಗಿದೆ ಎಂದು ನಂಬಿಸಿದ್ದ.
ಪೊಲೀಸ್ ಡ್ರೆಸ್ನಲ್ಲಿ ವಿಡಿಯೋ ಕರೆ
ವಂಚಕ ವ್ಯಕ್ತಿ ಪೊಲೀಸರ ಸಮವಸ್ತ್ರ ಧರಿಸಿ ವಿಡಿಯೋ ಕರೆ ಮಾಡಿದ್ದು ವೃದ್ಧ ಶಿಕ್ಷಕನನ್ನು ನಂಬಿಕೆ ಬರುವಂತೆ ಮಾಡಿದ್ದ. ಅಲ್ಲದೆ, ನಕಲಿ ಬ್ಯಾಂಕ್ ಸ್ಟೇಟ್ಮೆಂಟ್ ಕಳುಹಿಸಿ, ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲ ಹಣವನ್ನು 'ನ್ಯಾಷನಲ್ ಫಂಡ್'ಗೆ ಜಮಾ ಮಾಡಬೇಕು, ತನಿಖೆ ಮುಗಿದ ಮೇಲೆ ಹಣ ವಾಪಸ್ ನೀಡಲಾಗುವುದು ಎಂದು ನಂಬಿಸಿದ್ದ. ಈ ಬಗ್ಗೆ ಯಾರ ಬಳಿಯೂ ತಿಳಿಸದಂತೆ ಬೆದರಿಸಿದ್ದು, ನೀವು ಡಿಜಿಟಲ್ ಅರೆಸ್ಟ್ ನಲ್ಲಿದ್ದೀರಿ, ಪ್ರತಿ ಎರಡು ಗಂಟೆಗೊಮ್ಮೆ ವಾಟ್ಸಪ್ ಮೂಲಕ ವರದಿ ನೀಡುವಂತೆ ಸೂಚಿಸಿದ್ದ.
ಸಾಲ ಮಾಡಿ ಹಣ ಕೊಟ್ಟ ನಿವೃತ್ತ ಶಿಕ್ಷಕ
ವಂಚಕನ ಮಾತನ್ನು ನಂಬಿದ ಪಾಲ್ಡೆನ್ ತಮ್ಮ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಎಫ್ಡಿ ಹಣ ಹಾಗೂ ಸಂಬಂಧಿಕರಿಂದ ಸಾಲ ಪಡೆದು ಸುಮಾರು 1.61 ಕೋಟಿ ರೂಪಾಯಿಯನ್ನು ಹಂತ ಹಂತವಾಗಿ ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಕೊನೆಗೆ, ಹಾಕಿದ ಹಣ ಹಿಂತಿರುಗಿಸದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು ಕಾರವಾರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a shocking case of cybercrime, fraudsters posing as Mumbai Police officers extorted ₹1.61 crore from a 72-year-old retired teacher from the Tibetan Colony in Mundgod by falsely claiming he was linked to terrorists and under “digital arrest.”
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm