ಬ್ರೇಕಿಂಗ್ ನ್ಯೂಸ್
02-01-26 12:58 pm Mangalore Correspondent ಕ್ರೈಂ
ಮಂಗಳೂರು, ಜ.2 : ಕೋಣಗಳನ್ನು ಮುದ್ದಿನಿಂದ ಸಾಕಿ ಕಂಬಳಕ್ಕೆ ಓಡಿಸಲು ಕೊಂಡೊಯ್ಯುವ ಮುಲ್ಕಿಯ ಅಂಗಾರಗುಡ್ಡೆ ಕೆಂಚನಕೆರೆ ನಿವಾಸಿ ಶಂಸುದ್ದೀನ್ ಎಂಬವರ ಮನೆಗೆ ನುಗ್ಗಿದ ಮೂವರು ಆರೋಪಿಗಳು, ನೀನು ದನ, ಕೋಣಗಳನ್ನು ಸಾಕಿ ಕಡಿಯಲಿಕ್ಕೆ ಕೊಡುತ್ತೀಯಲ್ವಾ ಎಂದು ಹೇಳಿ ಹಣಕ್ಕಾಗಿ ಪೀಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಮುಲ್ಕಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಅಂಗಾರಗುಡ್ಡೆ ಕೆಂಚನಕೆರೆಯಲ್ಲಿ ಮುಂಬೈನಲ್ಲಿ ನೆಲೆಸಿರುವ ಬಂಟ ಸಮುದಾಯದ ಒಬ್ಬರಿಗೆ ಸೇರಿದ ಗದ್ದೆ, ತೋಟದ ಜಾಗ ಮತ್ತು ಮನೆಯನ್ನು ಶಂಸುದ್ದೀನ್ ಎಂಬವರು ಹಲವಾರು ವರ್ಷಗಳಿಂದ ನೋಡಿಕೊಂಡಿದ್ದು, ಶೆಟ್ಟರಿಗೆ ಸೇರಿದ ಮನೆಯ ಹಟ್ಟಿಯಲ್ಲಿ ಏಳೆಂಟು ಕೋಣಗಳನ್ನು ಸಾಕುತ್ತಿದ್ದಾರೆ. ಶಂಸುದ್ದೀನ್ ಮತ್ತು ಅವರ ಮಗ ತಾಜುದ್ದೀನ್ ಕೋಣಗಳನ್ನು ಸಾಕುತ್ತ ಪ್ರತಿ ಕಂಬಳಕ್ಕೂ ಕೋಣಗಳನ್ನು ಒಯ್ಯುತ್ತಿದ್ದಾರೆ.


ಮೊನ್ನೆ ಮುಲ್ಕಿಯಲ್ಲಿ ನಡೆದ ಅರಸು ಕಂಬಳದಲ್ಲಿ ಶಂಸುದ್ದೀನ್ ಅವರ ಕೋಣಗಳಿಗೆ ಬಹುಮಾನ ಸಿಕ್ಕಿತ್ತು. ಹೀಗಾಗಿ ಅಲ್ಲಿ ಸಿಕ್ಕಿರುವ ಬಂಗಾರದ ಸರದ ಜೊತೆಗೆ ಹಣ ಕೊಡಬೇಕೆಂದು ಮೂವರು ಆರೋಪಿಗಳು ನಿನ್ನೆ ಗುರುವಾರ ಸಂಜೆ ಶಂಸುದ್ದೀನ್ ಅವರ ಮನೆಗೆ ಬಂದಿದ್ದರು. ಶಂಸುದ್ದೀನ್ ಮತ್ತು ಅವರ ಮಗ ಕೋಣಗಳನ್ನು ಸ್ನಾನ ಮಾಡಿಸುತ್ತಿದ್ದಾಗ, ಆರೋಪಿಗಳಾದ ಕಾರ್ನಾಡು ನಿವಾಸಿ ಶ್ಯಾಮಸುಂದರ್ ಮತ್ತು ಕೆ.ಎಸ್ ರಾವ್ ನಗರದ ಅಕ್ಷಯ್ ಮತ್ತು ಇನ್ನೊಬ್ಬ ಬಂದಿದ್ದು ಚಿನ್ನದ ಸರ ಮತ್ತು ಹಣ ನೀಡುವಂತೆ ಕೇಳಿದ್ದಾರೆ.
ನೀವು ದನಗಳನ್ನು ಸಾಕಿ ಕಡಿಯಲು ಕೊಡುತ್ತಿದ್ದೀರಿ ಎಂದು ಆರೋಪಿಸಿ ಆರೋಪಿಗಳು ಹಣಕ್ಕಾಗಿ ಪೀಡಿಸಿದ್ದಲ್ಲದೆ, ಶಂಸುದ್ದೀನ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆಸುಪಾಸಿನ ಹಿಂದು ನಿವಾಸಿಗಳು ಬಂದು ಶಂಸುದ್ದೀನ್ ಜೊತೆ ಸೇರಿ ಹಲ್ಲೆಯನ್ನು ತಪ್ಪಿಸಿದ್ದಾರೆ. ಅಲ್ಲದೆ, ಹಣ ಕೇಳಿಕೊಂಡು ಬಂದಿದ್ದವರನ್ನು ಓಡಿಸಿದ್ದಾರೆ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶ್ಯಾಮಸುಂದರ್ ಮತ್ತು ಅಕ್ಷಯ್ ನನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಆರೋಪಿ ಅಕ್ಷಯ್ ವಿರುದ್ಧ ಮುಲ್ಕಿ ಠಾಣೆಯಲ್ಲಿ ಎರಡು ಕೇಸ್ ಇದೆ.
In Mulki’s Angaragudde, three men allegedly entered the house of Shamsuddin, the owner of prize-winning Kambala buffaloes, and demanded money and a gold chain, accusing him of giving cattle for slaughter.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm