ಬ್ರೇಕಿಂಗ್ ನ್ಯೂಸ್
07-01-26 10:45 pm Bangalore Correspondent ಕ್ರೈಂ
ಬೆಂಗಳೂರು, ಜ 07 : ಪೋಷಕರ ಜತೆಗೆ ನೆಲಸಿದ್ದ ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವ ಘಟನೆ ನಾಗರದ ವೈಟ್ಫೀಲ್ಡ್ ಬಳಿ ನಡೆದಿದೆ.
ಪಶ್ಚಿಮ ಬಂಗಾಳದ ಇಂಜಮುಲ್ ಶೇಖ್ ಅವರ ಪುತ್ರಿ ಶಹನಾಜ್ ಖಾತುನ್ ಕೊಲೆಯಾದವಳು. ಆರೋಪಿಯ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೆಲವು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಇಂಜಮುಲ್ ಶೇಖ್ ಕುಟುಂಬವು ನಲ್ಲೂರುಹಳ್ಳಿ ಸುತ್ತಮುತ್ತ ಕೂಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಮನೆಯ ಎದುರು ಬಾಲಕಿ ಆಟವಾಡುತ್ತಿದ್ದಳು. ಆಗ ಅಪಹರಣ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು. ಠಾಣೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾಗ ದೇವಸ್ಥಾನದ ಪಕ್ಕದ ಕಾಲುವೆಯಲ್ಲಿ ಅದೇ ದಿನ ರಾತ್ರಿ ಮೃತದೇಹ ಪತ್ತೆಯಾಗಿದೆ.
ಬಾಲಕಿಯ ಪೋಷಕರು ವಾಸವಿದ್ದ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಯ ಪತ್ತೆಗೆ ಮೂರು ವಿಷೇಶ ತಂಡ ರಚಿಸಲಾಗಿದೆ. ಮೃತದೇಹದಲ್ಲಿ ಬೇರೆ ಯಾವುದೇ ಗಾಯಗಳು ಕಂಡುಬಂದಿಲ್ಲ. ಪ್ಲಾಸ್ಟಿಕ್ ಹಗ್ಗ ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದರು.
ಪಕ್ಕದ ಮನೆಯ ನಿವಾಸಿಯ ಜತೆಗೆ ಬಾಲಕಿಯ ತಾಯಿ ಇತ್ತೀಚೆಗೆ ಜಗಳವಾಡಿದ್ದರು. ಅದೇ ಸಿಟ್ಟಿನಿಂದ ಆ ವ್ಯಕ್ತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದರು
A heartbreaking incident has been reported near Whitefield, where a 6-year-old girl was kidnapped and murdered, allegedly as an act of revenge following a quarrel involving her mother. The accused stuffed the child’s body in a plastic bag and dumped it in a drain.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am