ಬ್ರೇಕಿಂಗ್ ನ್ಯೂಸ್
11-01-26 09:59 pm Mangaluru Staff ಕ್ರೈಂ
ಮಂಗಳೂರು, ಜ.11: ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ಚರುಮುರಿ ಸ್ಟಾಲ್ ಇರಿಸಿದ್ದಾಗ ಅಲ್ಲಿಗೆ ದನವೊಂದು ಬಂದಿದ್ದು ಟೊಮೆಟೋ ತಿನ್ನಲು ಮುಂದಾಗಿತ್ತು. ಈ ವೇಳೆ, ವ್ಯಕ್ತಿ ಕೋಪಗೊಂಡು ಟೊಮೆಟೋ ಕೊಯ್ಯುವ ಹರಿತ ಚೂರಿಯಲ್ಲಿ ದನದ ಮುಖಕ್ಕೆ ಬೀಸಿದ್ದು ಮುಖದ ಭಾಗದಲ್ಲಿ ಎರಡು ಇಂಚು ಆಳದ ಗಾಯವಾಗಿ ರಕ್ತ ಹರಿದಿತ್ತು.
ಚೂರಿ ಇರಿದ ವ್ಯಕ್ತಿಯನ್ನು ಚರಮುರಿ ಸ್ಟಾಲ್ ನ ಉಮರಬ್ಬ ಎಂದು ತಿಳಿದುಬಂದಿದೆ. ಈತ ಜಾತ್ರೆಯ ವೇಳೆ ಹಲವೆಡೆ ಚರುಮುರಿ ಸ್ಟಾಲ್ ಹಾಕಿ ವ್ಯಾಪಾರ ನಡೆಸುತ್ತಿದ್ದು ದನಕ್ಕೆ ಕತ್ತಿಯಿಂದ ಇರಿದ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ದನವನ್ನು ಹಿಡಿದು ಸ್ಥಳೀಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಘಟನೆ ಬಗ್ಗೆ ಯಾರೂ ಪೊಲೀಸರಿಗೆ ದೂರು ನೀಡಿಲ್ಲ ಎನ್ನಲಾಗಿದೆ. ಬಜರಂಗದಳ ಜಿಲ್ಲಾ ಮುಖಂಡರು ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಕಮಿಷನರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಆಕಸ್ಮಿಕವಾಗಿ ಘಟನೆ ಆಗಿದೆ. ದನವನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಟ್ಟಿರುವುದು ತಪ್ಪು. ಹಾಗಾಗಿ ಅದರ ಮಾಲೀಕರ ವಿರುದ್ಧ ಕೇಸು ದಾಖಲಿಸಲಾಗಿದೆ. ಮತ್ತು ದನದ ಮೇಲೆ ಕ್ರೌರ್ಯ ತೋರಿಸಿದ್ದಕ್ಕಾಗಿ ಚೂರಿ ಬೀಸಿದ ವ್ಯಕ್ತಿಯ ವಿರುದ್ಧ ಸುಮೊಟೋ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
In a disturbing incident reported from Poopadikallu near Edapadavu, a man allegedly stabbed a cow on the face with a knife during an Ayyappa Swami worship programme, triggering anger among locals.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm