ಬ್ರೇಕಿಂಗ್ ನ್ಯೂಸ್
12-01-26 01:54 pm Mangaluru Staffer ಕ್ರೈಂ
ಮಂಗಳೂರು, ಜ.11: ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ನಡೆಸಿದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಕುಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಹಿಂದು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಎಂಬಾತ ಕಳೆದ 10–15 ವರ್ಷಗಳಿಂದ ಮಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದು ತನ್ನ ಇನ್ನೊಬ್ಬ ಗೆಳೆಯನ ಜೊತೆಗೆ ಕುಳೂರಿನಲ್ಲಿ ನೆಲೆಸಿದ್ದ. ಈತನಿಗೆ ಸ್ಥಳೀಯರಾದ ನಾಲ್ವರು ಆರೋಪಿಗಳು ಕಳೆದ 5-6 ತಿಂಗಳಿನಿಂದ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಹೇಳಿ ಹಲ್ಲೆ ನಡೆಸುತ್ತಿದ್ದರು. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ.
ನಿನ್ನೆ ಭಾನುವಾರ ಸಂಜೆ ಮತ್ತೆ ದಿಲ್ಜಾನ್ ಅನ್ಸಾರಿ ಮೇಲೆ ಹಲ್ಲೆ ನಡೆಸಿದ್ದು ತಲೆಗೆ ಪೆಟ್ಟು ಬಿದ್ದು ರಕ್ತ ಬಂದಿದೆ. ಈ ವೇಳೆ, ಸ್ಥಳೀಯ ಹಿಂದು ಮಹಿಳೆಯರು ರಕ್ಷಿಸಿ ಹೊಡೆಯದಂತೆ ತಡೆದಿದ್ದಾರೆ. ಆದರೆ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದ. ಈ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧಿಸಿ ಹಲ್ಲೆಗೀಡಾದ ವ್ಯಕ್ತಿಯಿಂದ ಮಾಹಿತಿ ಪಡೆದು ದೂರು ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
A case of attempted murder has been registered at the Kavoor Police Station against four youths from Kuloor for allegedly assaulting a migrant labourer after accusing him of being a Bangladeshi national. The incident occurred near Kuloor Church under the Kavoor police limits. The accused have been identified as Sagar, Dhanush, Lalu alias Ratheesh, and Mohan, all residents of Kuloor. Police have launched a manhunt to arrest the accused.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm