ಬ್ರೇಕಿಂಗ್ ನ್ಯೂಸ್
13-01-26 05:28 pm HK News Desk ಕ್ರೈಂ
ಧಾರವಾಡ, ಜ 13 : ಗುತ್ತಿಗೆದಾರನನ್ನು ಕೊಲೆ ಮಾಡಿ ಬಿಲ್ಡಿಂಗ್ ಮೇಲಿಂದ ಕಾಲು ಜಾರಿ ಬಿದ್ದಿದ್ದಾರೆ ಎಂದು ಬಿಂಬಿಸಲು ಹೋಗಿ ಮೂವರು ಜೈಲು ಪಾಲಾದ ಘಟನೆ ಕಾನೂನು ವಿವಿ ಹತ್ತಿರದ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾದ ವಿಠಲ ರಾಥೋಡ್ (65) ಕೊಲೆಯಾದ ವ್ಯಕ್ತಿ. ಮೇಘವ ಸತನಾಮಿ (50) ಭಗವಾನ ದಾಸ ಸತನಾಮಿ (21), ವಿಮಲಾ ಸತನಾಮಿ (41) ಆರೋಪಿಗಳು. ಇವರೆಲ್ಲ ಸೇರಿಕೊಂಡು ವಿಠ್ಠಲ ರಾಥೋಡ್ ಅನ್ನು ಕೊಲೆ ಮಾಡಿ ಕಟ್ಟಡದ ಮೇಲಿಂದ ಬಿದ್ದಿದ್ದಾರೆ, ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೃತನ ಮಗನಿಗೆ ಕರೆ ಮಾಡಿ ತಿಳಿಸಿದ್ದಾರೆ.

ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅಲ್ಲಿದ್ದವರನ್ನು ವಿಚಾರಣೆ ನಡೆಸಿದಾಗ ಘಟನೆ ಆಕಸ್ಮಿಕವಾಗಿರದೇ ಕೊಲೆ ಎಂದು ಗೊತ್ತಾದ ಮೇಲೆ ಈ ಮೂವರು ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡು ತನಿಖೆ ಮುಂದುವರೆಸಿದ್ದಾರೆ.
ಮೂವರು ಆರೋಪಿಗಳು ಛತ್ತೀಸ್ಗಡ ಮೂಲದವರಾಗಿದ್ದು, ಮೃತ ವಿಠ್ಠಲ ರಾಥೋಡ್ ಬಳಿ ನಾಲ್ಕೈದು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ವಿಮಲಾ ಸತನಾಮಿ ಜೊತೆಗೆ ಮೃತ ವಿಠ್ಠಲ ರಾಥೋಡ್ ಆತ್ಮೀಯತೆಯಿಂದ ಇರುವುದೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್, "ಕಾನೂನು ವಿವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಆಡಳಿತ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಅದರಲ್ಲಿ ಕೆಲಸ ಮಾಡುತ್ತಿದ್ದಂತಹ ಮೂರು ಜನ ಕಾರ್ಮಿಕರು ಹಾಗೂ ಕಾರ್ಮಿಕ ಗುತ್ತಿಗೆದಾರ ವಿಠ್ಠಲ ರಾಥೋಡ್ ನಡುವೆ ಜ. 10ರಂದು ರಾತ್ರಿ ಜಗಳವಾಗಿದೆ. ಜಗಳ ತಾರಕಕ್ಕೇರಿ ಅಲ್ಲಿದ್ದ ಮಹಿಳೆಯ ಮಗ ವಿಠ್ಠಲ್ ರಾಥೋಡ್ ಮೇಲೆ ಹಲ್ಲೆ ಮಾಡಿದ್ದಾನೆ. ಮೂರೂ ಜನ ಸೇರಿ ಆತ ಕಟ್ಟಡದ ಮೇಲಿಂದ ಬಿದ್ದಿದ್ದಾರೆ ಎಂಬ ರೀತಿ ಬಿಂಬಿಸುತ್ತಾರೆ. ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದಾಗಲೂ, ಆರೊಪಿಗಳು ಅಲ್ಲಿಯೂ ಅದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ವೇಳೆ ನಮ್ಮ ಅಧಿಕಾರಿಗಳಿಗೆ ಅಲ್ಲಿ ಕಟ್ಟಡದಿಂದ ಬಿದ್ದು ಪೆಟ್ಟಾಗುವಂತೆ ಇಲ್ಲ ಎಂಬ ಸಂಶಯ ಬಂದಿದೆ. ಇದೇ ಆಧಾರದ ಮೇಲೆ ಸಂಶಯಾತ್ಮಕ ವ್ಯಕ್ತಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಯಿತು" ಎಂದು ತಿಳಿಸಿದ್ದಾರೆ.
"ಮೇಘವ್ ಸತನಾಮಿ, ಆತನ ಪತ್ನಿ ವಿಮಲಾ ಸತನಾಮಿ ಹಾಗೂ ಮಗ ಭಗವಾನ ದಾಸ ಸತನಾಮಿ, ಛತ್ತೀಸ್ಗಡ ಮೂಲದವರು. ಇದೇ ಗುತ್ತಿಗೆದಾರ ಜೊತೆ ಕಳೆದ ನಾಲ್ಕೈದು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಗುತ್ತಿಗೆದಾರ ವಿಠ್ಠಲ್ ರಾಥೋಡ್ಗೆ ವಿಮಲಾ ಜೊತೆ ಹೆಚ್ಚು ಆತ್ಮೀಯತೆ ಇತ್ತು ಎಂದು ವಿಮಲಾಳ ಗಂಡ ಹಾಗೂ ಮಗ ಯಾವಾಗಲೂ ವಿರೋಧಿಸುತ್ತಾ ಇರುತ್ತಾರೆ. ಇದೇ ವಿಷಯಕ್ಕೆ ಮೊನ್ನೆ ಆದಂತಹ ಸಂಘರ್ಷದಲ್ಲಿ ಆತನಿಗೆ ಪೆಟ್ಟು ಬಿದ್ದಿದೆ. ನಂತರ ಆತ ಸಾವನ್ನಪ್ಪಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ" ಎಂದು ಮಾಹಿತಿ ನೀಡಿದರು.
In a shocking incident near Karnataka Law University in Dharwad, three people were arrested for murdering a contractor and attempting to portray the crime as an accidental fall from a building under construction. The victim, 65-year-old Vithal Rathod from Vijayapura district, was allegedly killed following a dispute triggered by his alleged illicit relationship with one of the accused woman, Vimala Satanami.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm