ಬ್ರೇಕಿಂಗ್ ನ್ಯೂಸ್
14-01-26 09:49 pm Bangalore Correspondent ಕ್ರೈಂ
ಬೆಂಗಳೂರು, ಜ 14 : ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ನಗರದ ಹುಳಿಮಾವು ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿದ್ದ 11 ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಆರೋಪಿಗಳು ವಂಚಿಸಿದ್ದ 94 ಲಕ್ಷ ರೂ. ಹಣ ಹಿಂಪಡೆಯಲಾಗಿದ್ದು, ವಿವಿಧ ಖಾತೆಗಳಲ್ಲಿದ್ದ 240 ಕೋಟಿ ರೂ. ಹಣವನ್ನು ಫ್ರೀಜ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ದೆಹಲಿಯ ಓಲ್ಡ್ ರಾಜೇಂದ್ರ ನಗರದಲ್ಲಿ ಕಾಲ್ಸೆಂಟರ್ ನಡೆಸುತ್ತಿದ್ದ ಆರೋಪಿಗಳು, ಜನರಿಗೆ ಕರೆ ಮಾಡಿ ಹೂಡಿಕೆ ಯೋಜನೆಗಳ ಬಗ್ಗೆ ಆಕರ್ಷಿಸುತ್ತಿದ್ದರು. ನಂತರ ತಮ್ಮದೇ ಅನಧಿಕೃತ ಆ್ಯಪ್ ಇನ್ಸ್ಟಾಲ್ ಮಾಡಿಸಿ ಅದರ ಮೂಲಕ ಹೂಡಿಕೆ ಮಾಡಿಸುತ್ತಿದ್ದರು. ಹಣ ಹೂಡಿಕೆ ಮಾಡಿದವರಿಗೆ ಆರಂಭದಲ್ಲಿ ಅಲ್ಪ ಪ್ರಮಾಣದಲ್ಲಿ ಲಾಭಾಂಶ ನೀಡುವ ಮೂಲಕ ನಂಬಿಕೆ ಗಳಿಸುತ್ತಿದ್ದರು.
ಆದರೆ, ಹೆಚ್ಚು ಹಣ ಹೂಡಿಕೆ ಮಾಡಿದ ಬಳಿಕ ವಾಪಸ್ ಪಡೆಯುವ ಅವಕಾಶ ನೀಡುತ್ತಿರಲಿಲ್ಲ. ಇದೇ ರೀತಿ ನೂರಾರು ಜನರಿಗೆ ವಂಚಿಸಿದ್ದ ಆರೋಪಿಗಳ ವಿರುದ್ಧ ದೇಶದ ವಿವಿಧೆಡೆ ಹಾಗೂ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಇದೇ ವೇಳೆ, ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 3.20 ಕೋಟಿ ರೂ ವಂಚಿಸಿದ್ದ ಆರೋಪಿಗಳ ವಿರುದ್ದ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ವಂಚನೆ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರಂಭದಲ್ಲಿ ಹಣ ವರ್ಗಾವಣೆಯಾಗಿದ್ದ ಖಾತೆಗಳ ಮಾಲೀಕರಾದ ಮಹಮ್ಮದ್ ಹುಜೈಫಾ ಮತ್ತು ಆತನ ತಾಯಿ ಸಭಾ ಎಂಬಾಕೆಯನ್ನು ಬಂಧಿಸಿದ್ದರು. ಪ್ರಮುಖ ಆರೋಪಿಗಳ ಸೂಚನೆಯಂತೆ 'ಮ್ಯೂಲ್ ಅಕೌಂಟ್' ತೆರೆದುಕೊಟ್ಟಿರುವುದಾಗಿ ಬಂಧಿತರು ಬಾಯ್ಬಿಟ್ಟಿದ್ದರು. ನಂತರ ಹಣ ವರ್ಗಾವಣೆಯಾಗಿದ್ದ ಖಾತೆಗಳ ವಿವರಗಳನ್ನು ಆಧರಿಸಿ ದೆಹಲಿ ಸೇರಿದಂತೆ ವಿವಿಧೆಡೆ 11 ಆರೋಪಿಗಳನ್ನು ಬಂಧಿಸಿದ್ದರು.
ಆರೋಪಿಗಳು ಸುಮಾರು 9 ಸಾವಿರ ಮ್ಯೂಲ್ ಅಕೌಂಟ್ಗಳನ್ನು ಬಳಸಿರುವುದು ಪತ್ತೆಯಾಗಿದ್ದು, ಬಂಧಿತರಿಂದ ಒಟ್ಟು 58 ಮೊಬೈಲ್ ಫೋನ್ಗಳು, 242 ಡೆಬಿಟ್ ಕಾರ್ಡ್ಗಳು, 7 ಲ್ಯಾಪ್ಟಾಪ್ಗಳು, 530 ಗ್ರಾಂ ಚಿನ್ನ, 4.89 ಲಕ್ಷ ನಗದು, 21 ಬ್ಯಾಂಕ್ ಪಾಸ್ಬುಕ್ಗಳು, 33 ಚೆಕ್ ಬುಕ್ಗಳು, 9 ಐಷಾರಾಮಿ ವಾಚುಗಳು, 1 ಆನ್ಲೈನ್ ಡಿಜಿಟಲ್ ಪೇಮೆಂಟ್ ರಿಂಗ್, 1 ಕ್ರಿಪ್ಟೊ ಕರೆನ್ಸಿ ಲೆಡ್ಜರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ದುಬೈನಲ್ಲಿದ್ದು, ಆತನ ಪತ್ತೆಗಾಗಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Bengaluru police have uncovered a major investment fraud network operating across multiple states, arresting 11 accused linked to a fake investment scheme. The gang allegedly ran an illegal call centre in Delhi, lured victims with attractive investment offers, and made them install unauthorized apps to siphon money. While victims initially received small returns to build trust, withdrawals were later blocked.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am