ಬ್ರೇಕಿಂಗ್ ನ್ಯೂಸ್
20-01-26 07:51 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ 60 ಲಕ್ಷ ವಂಚನೆ ಮಾಡಿದ್ದಾರೆಂದು ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಕಾಫಿ ತೋಟದ ಮಾಲೀಕ ದೀಪಕ್ ಎಂಬವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ನಟ ಕಿಚ್ಚ ಸುದೀಪ್ ಹಾಗೂ ಅವರ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ದೂರು ನೀಡಿದ್ದಾರೆ. ದೀಪಕ್ ಅವರಿಗೆ ಸೇರಿದ್ದ ಮನೆ ಹಾಗೂ ಕಾಫಿ ತೋಟದಲ್ಲಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅಗ್ರಿಮೆಂಟ್ ಪ್ರಕಾರ ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
'ವಾರಸ್ಥಾರ' ಎಂಬ ಧಾರಾವಾಹಿಗಾಗಿ ಮನೆ ಹಾಗೂ ಕಾಫಿ ತೋಟದಲ್ಲಿ ಚಿತ್ರೀಕರಣ ಮಾಡಲು ಎರಡು ವರ್ಷಗಳ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಚಿತ್ರೀಕರಣ ಆರಂಭಿಸಿದ ಕೆಲವೇ ದಿನಗಳಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿದ್ದಾರೆ. ಚಿತ್ರೀಕರಣ ಉದ್ದೇಶಕ್ಕಾಗಿ ಕಾಫಿ ತೋಟ, ಮರಗಳನ್ನು ನಾಶ ಮಾಡಿದ್ದಾರೆ. ಆದರೆ ಅಗ್ರಿಮೆಂಟ್ ನಂತೆ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ 95 ಲಕ್ಷ ಪರಿಹಾರ ನೀಡುವಂತೆ ಕಿಚ್ಚ ಸುದೀಪ್ ಹಾಗೂ ಚಂದ್ರಚೂಡ್ ವಿರುದ್ಧ ಕೋರ್ಟ್ ಕೇಸ್ ಹಾಕಿದ್ದರು. ಬಳಿಕ ಕೇಸ್ ವಾಪಸ್ ಪಡೆಯಿರಿ 60 ಲಕ್ಷ ಹಣ ನೀಡುವುದಾಗಿ ನಟ ಕಿಚ್ಚ ಸುದೀಪ್ ಭರವಸೆ ನೀಡಿದ್ದರು. ಮಾತುಕತೆ ಬಳಿಕ ಪ್ರಕರಣ ವಾಪಸ್ ಪಡೆದಿದ್ದರೂ ಹಣ ನೀಡಿರಲಿಲ್ಲ.
ಪ್ರಕರಣ ಹಿಂಪಡೆಯುವ ಮುನ್ನ ನಟ ಸುದೀಪ್ ಅವರ ಮ್ಯಾನೇಜರ್ ಚಂದ್ರಚೂಡ್ 10 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಆನಂತರ ಬಾಕಿ ಹಣ ನೀಡದೇ ವಂಚಿಸಿದ್ದಾರೆ ಎಂದು ದೀಪಕ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ದೂರು ನೀಡಿದ್ದಾರೆ.
Actor Kiccha Sudeep and his manager Chandrachood have been accused of cheating to the tune of ₹60 lakh by two coffee estate owners, who have filed a complaint with the Bengaluru Police Commissioner.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm