ಬ್ರೇಕಿಂಗ್ ನ್ಯೂಸ್
22-01-26 02:40 pm Bangalore Correspondent ಕ್ರೈಂ
ಬೆಂಗಳೂರು, ಜ.22 : ರಾಜ್ಯದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿಗೈದ ಆರೋಪದಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಒಂದು ಕೋಟಿ ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ.
ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.
ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದಿದ್ದು, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೆದರಿಕೆ ಮುಂದುವರಿಸಿದ್ದಳು. ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈಗ ಬ್ಲ್ಯಾಕ್ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ.
Bengaluru CCB police have arrested a young woman from Chikkamagaluru for allegedly blackmailing a Swami and extorting money from him. The accused reportedly collected ₹4.5 lakh and later demanded ₹1 crore, threatening defamation if the money was not paid.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am