ಬ್ರೇಕಿಂಗ್ ನ್ಯೂಸ್
25-01-26 09:48 am HK News Desk ಕ್ರೈಂ
ಬೆಳಗಾವಿ, ಜ.25: ಇಡೀ ದೇಶವೇ ಬೆಚ್ಚಿಬೀಳುವಂತಹ ಅತಿ ದೊಡ್ಡ ದರೋಡೆ ಪ್ರಕರಣ ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ನಡೆದಿದೆ. ಗೋವಾದಿಂದ ಬೆಳಗಾವಿ ಹೆದ್ದಾರಿಯಲ್ಲಿ ಮಹಾರಾಷ್ಟ್ರ ಕಡೆಗೆ ಕಂಟೇನರ್ನಲ್ಲಿ ನಾಲ್ಕು ನೂರು ಕೋಟಿಗೂ ಹೆಚ್ಚು ಹಣವನ್ನು ಸಾಗಾಟ ಮಾಡುತ್ತಿದ್ದಾಗ ದರೋಡೆಕೋರರು ಅಪಹರಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಛೋರ್ಲಾ ಘಾಟ್ ನಲ್ಲಿ ಕಳೆದ ಅಕ್ಟೋಬರ್ 16ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 2025 ಅಕ್ಟೋಬರ್ 16 ರಂದು ರಾಬರಿ ನಡೆದಿದ್ದು ಕಂಟೇನರ್ ಹುಡುಕಾಟಕ್ಕಾಗಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಪೊಲೀಸರು ಶೋಧ ನಡೆಸಿದ್ದಾರೆ.
ಪ್ರಕರಣ ಗಂಭೀರವಾಗಿ ಪರಿಗಣಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ತನಿಖೆಗೆ ಎಸ್ಐಟಿ ರಚಿಸಿ ಆದೇಶ ಮಾಡಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಎಂಬವರಿಗೆ ಸೇರಿದ ಹಣ ಇದಾಗಿದೆ ಎಂದು ಮಾಹಿತಿ ಇದೆ.


ಬೆಳಕಿಗೆ ಬಂದಿರೋದೇ ರೋಚಕ !
ಕಂಟೇನರ್ ರಾಬರಿ ಸಂದರ್ಭದಲ್ಲಿ ಅದರಲ್ಲಿದ್ದ ಸಂದೀಪ್ ಪಾಟೀಲ ಎಂಬುವರನ್ನು ಎರಡು ತಿಂಗಳ ಕಾಲ ಗನ್ ಪಾಯಿಂಟ್ ಹಿಡಿದು ಕಿಶೋರ್ ಶೇಟ್ ಸಹಚರರು ಕಿರುಕುಳ ನೀಡಿದ್ದಾರೆ. ಈತ ನಾಸಿಕ್ ಮೂಲದವನಾಗಿದ್ದು ಒಂದೂವರೆ ತಿಂಗಳು ಒತ್ತೆಯಾಳಾಗಿಸಿ ಚಿತ್ರಹಿಂಸೆ ನೀಡಿದ್ದಾರೆ. ಕಂಟೇನರ್ ಹೈಜಾಕ್ಗೆ ನೀನೇ ಕಾರಣ ಎಂದು ಸಂದೀಪ್ಗೆ ಕಿಶನ್ ಸಹಚರರು ಕಿರುಕುಳ ನೀಡಿದ್ದಾರೆ. ನೀನೇ ಹಣ ಎಗಿರಿಸಿದ್ದೀಯಾ! 400 ಕೋಟಿ ಕೊಡದಿದ್ರೆ ಜೀವ ತೆಗೆಯುತ್ತೇವೆಂದು ಬೆದರಿಕೆ ಒಡ್ಡಿದ್ದಾರೆ. ಆದರೆ ಈ ವೇಳೆ ಕಿಶೋರ್ ಅಪಹರಣಕಾರರಿಂದ ತಪ್ಪಿಸಿಕೊಂಡು ನಾಸಿಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ನಾಲ್ಕನೂರು ಕೋಟಿ ಹಣವಿದ್ದ ವಾಹನ ಅಪಹರಿಸಿದ್ದಾಗಿ ಉಲ್ಲೇಖಿಸಿದ್ದಾನೆ.
ಸಂದೀಪ್ ಪಾಟೀಲ ನೀಡಿದ ದೂರಿನ ಅನ್ವಯ ಪೊಲೀಸರು ನಾಲ್ವರ ಬಂಧಿಸಿದ್ದು ತನಿಖೆ ನಡೆಸಿದ್ದಾರೆ. ಇದೇ ವೇಳೆ, ಎಸ್ಐಟಿ ರಚನೆಯಾಗಿದ್ದು ಮತ್ತೊಂದೆಡೆ ಪ್ರಕರಣ ತನಿಖೆಗೆ ಸಹಕಾರ ನೀಡುವಂತೆ ಬೆಳಗಾವಿ ಎಸ್ಪಿ ರಾಮರಾಜನ್ಗೂ ಮಹಾರಾಷ್ಟ್ರ ಪೊಲೀಸರು ಪತ್ರ ಬರೆದಿದ್ದಾರೆ. ಮತ್ತೊಂದೆಡೆ ಗೋವಾ ಪೊಲೀಸರ ಸಹಕಾರವನ್ನೂ ಕೇಳಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗೆ ಈ ಹಣ ಬಳಕೆಗೆಂದು ಒಯ್ಯುತ್ತಿದ್ದ ಬಗ್ಗೆ ಮಾಹಿತಿಯಿದೆ.
In one of the biggest robbery cases ever reported in the country, a container carrying more than ₹400 crore in cash was hijacked near Belagavi, close to the Maharashtra border. The incident took place on the Goa–Belagavi highway in the Chorla Ghat area of Khanapur taluk, Belagavi district.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am