ಬ್ರೇಕಿಂಗ್ ನ್ಯೂಸ್
30-01-26 08:56 pm Mangalore Correspondent ಕ್ರೈಂ
ಮಂಗಳೂರು, ಜ.30 : ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ ಎಗರಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿ ಮಂಗಳೂರಿನ ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬರ್ಕೆ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ. 23 ರಂದು ಸಂಜೆ 7 ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಲಿ ಬ್ಯಾಗ್ ಇಟ್ಟು ಕುಳಿತುಕೊಂಡಿದ್ದಾಗ ಯಾರೋ ಕಳ್ಳರು ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ಕಳವು ಮಾಡಿಕೊಂಡ ಹೋದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಯ ಬಗ್ಗೆ ಪಿಎಸ್ಐ ವಿನಾಯಕ ತೊರಗಲ್, ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ಅವರಿದ್ದ ತಂಡವು ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನಾದ, ಮಡಿಕೇರಿಯ ತ್ಯಾಗರಾಜ್ ಕಾಲೋನಿ ನಿವಾಸಿ ಮಹಮ್ಮದ್ ಇಮ್ರಾನ್ (44) ಎಂಬಾತನನ್ನು ಜ.28ರಂದು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿಯಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿತನಿಂದ ಒಟ್ಟು ರೂ. 6,47,920/- ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಹಾಗೂ ರೂ.5000/- ನಗದು ಹಣವನ್ನು* ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಸದ್ರಿ ಆರೋಪಿ ಬಸ್ ನಿಲ್ದಾಣಗಳಲ್ಲಿ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್ ಗಳನ್ನು ಕಳ್ಳತನ ಮಾಡುವ ರೂಢಿಗತ ಆರೋಪಿಯಾಗಿದ್ದು ಈತನ ಮೇಲೆ ಒಟ್ಟು 11 ಪ್ರಕರಣಗಳು ವಿವಿಧ ಕಡೆ ದಾಖಲಾಗಿರುತ್ತದೆ. ಆರೋಪಿ ಮೇಲೆ ದುದ್ದ ಪೊಲೀಸ್ ಠಾಣೆಯಲ್ಲಿ-1, ಕೊಮನೂರು ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ-1, ಹಾಸನ ನಗರ ಪೊಲೀಸ್ ಠಾಣೆಯಲ್ಲಿ-1, ಚೆನ್ನರಾಯಪಟ್ಟಣ ನಗರ ಠಾಣೆಯಲ್ಲಿ-1, ಮೈಸೂರು ದೇವರಾಜ ನಗರ ಪೊಲೀಸ್ ಠಾಣೆಯಲ್ಲಿ-1 ಬ್ಯಾಗ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಹಾಸನ ಜಿಲ್ಲೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ -2, ಹಾಸನ ಜಿಲ್ಲೆ ದುದ್ದ ಪೊಲೀಸ್ ಠಾಣೆಯಲ್ಲಿ-1 ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಅಲ್ಲದೇ ಆರೋಪಿ ಹಾಸನ ಜಿಲ್ಲೆಯ ಮನೆಕಳವು ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ವಾರೆಂಟ್ ಹೊರಡಿಸಿತ್ತು.
Berke police have arrested a notorious inter-district thief from Madikeri who targeted passengers at bus stands by stealing bags containing gold and cash. The accused was nabbed near Mangaluru Central Railway Station, and gold ornaments worth over ₹6.47 lakh were recovered. He is a habitual offender with 11 cases registered across multiple districts and has now been remanded to judicial custody.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am