ಬ್ರೇಕಿಂಗ್ ನ್ಯೂಸ್
30-01-26 08:56 pm Mangalore Correspondent ಕ್ರೈಂ
ಮಂಗಳೂರು, ಜ.30 : ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ ಎಗರಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿ ಮಂಗಳೂರಿನ ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬರ್ಕೆ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ. 23 ರಂದು ಸಂಜೆ 7 ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಲಿ ಬ್ಯಾಗ್ ಇಟ್ಟು ಕುಳಿತುಕೊಂಡಿದ್ದಾಗ ಯಾರೋ ಕಳ್ಳರು ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ಕಳವು ಮಾಡಿಕೊಂಡ ಹೋದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಯ ಬಗ್ಗೆ ಪಿಎಸ್ಐ ವಿನಾಯಕ ತೊರಗಲ್, ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ಅವರಿದ್ದ ತಂಡವು ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನಾದ, ಮಡಿಕೇರಿಯ ತ್ಯಾಗರಾಜ್ ಕಾಲೋನಿ ನಿವಾಸಿ ಮಹಮ್ಮದ್ ಇಮ್ರಾನ್ (44) ಎಂಬಾತನನ್ನು ಜ.28ರಂದು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿಯಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿತನಿಂದ ಒಟ್ಟು ರೂ. 6,47,920/- ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಹಾಗೂ ರೂ.5000/- ನಗದು ಹಣವನ್ನು* ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಸದ್ರಿ ಆರೋಪಿ ಬಸ್ ನಿಲ್ದಾಣಗಳಲ್ಲಿ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್ ಗಳನ್ನು ಕಳ್ಳತನ ಮಾಡುವ ರೂಢಿಗತ ಆರೋಪಿಯಾಗಿದ್ದು ಈತನ ಮೇಲೆ ಒಟ್ಟು 11 ಪ್ರಕರಣಗಳು ವಿವಿಧ ಕಡೆ ದಾಖಲಾಗಿರುತ್ತದೆ. ಆರೋಪಿ ಮೇಲೆ ದುದ್ದ ಪೊಲೀಸ್ ಠಾಣೆಯಲ್ಲಿ-1, ಕೊಮನೂರು ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ-1, ಹಾಸನ ನಗರ ಪೊಲೀಸ್ ಠಾಣೆಯಲ್ಲಿ-1, ಚೆನ್ನರಾಯಪಟ್ಟಣ ನಗರ ಠಾಣೆಯಲ್ಲಿ-1, ಮೈಸೂರು ದೇವರಾಜ ನಗರ ಪೊಲೀಸ್ ಠಾಣೆಯಲ್ಲಿ-1 ಬ್ಯಾಗ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಹಾಸನ ಜಿಲ್ಲೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ -2, ಹಾಸನ ಜಿಲ್ಲೆ ದುದ್ದ ಪೊಲೀಸ್ ಠಾಣೆಯಲ್ಲಿ-1 ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಅಲ್ಲದೇ ಆರೋಪಿ ಹಾಸನ ಜಿಲ್ಲೆಯ ಮನೆಕಳವು ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ವಾರೆಂಟ್ ಹೊರಡಿಸಿತ್ತು.
Berke police have arrested a notorious inter-district thief from Madikeri who targeted passengers at bus stands by stealing bags containing gold and cash. The accused was nabbed near Mangaluru Central Railway Station, and gold ornaments worth over ₹6.47 lakh were recovered. He is a habitual offender with 11 cases registered across multiple districts and has now been remanded to judicial custody.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm