ಬ್ರೇಕಿಂಗ್ ನ್ಯೂಸ್
01-02-26 03:41 pm HK News Staffer ಕ್ರೈಂ
Photo credits : AI PHOTO
ಬೆಳಗಾವಿ, ಫೆ.1: ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್ನಲ್ಲಿ ನಡೆದ 400 ಕೋಟಿ ಮೌಲ್ಯದ ಅಮಾನ್ಯ ನೋಟುಗಳ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ನಾಸಿಕ್ ಮೂಲದ ಉದ್ಯಮಿ ಕಿಶೋರ್ ಸಾಳ್ವೆಯನ್ನು ಪೊಲೀಸರು ಬಂಧಿಸಿದ್ದಾರೆ.
ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಯಲ್ಲಿ ಕಿಶೋರ್ ಸಾಳ್ವೆ ಶರಣಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಸರ್ಕಾರ ತನಿಖೆಗೆ ಎಸ್ಐಟಿ ರಚಿಸಿದ್ದು ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ದೂರುದಾರ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ದರೋಡೆಗೆ ಸಂಬಂಧಿಸಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದರ ನಡುವೆ, ಎಸ್ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಆರೋಪಗಳನ್ನು ಮಾಡಿದ್ದರು. ತನಿಖೆಯಲ್ಲಿ ಪಾರದರ್ಶಕತೆ ಇಲ್ಲ, ಒತ್ತಡದ ಹಾಗೂ ಏಕಪಕ್ಷೀಯ ತನಿಖೆ ನಡೆಯುತ್ತಿದೆ ಎಂದು ಅವರು ಫೇಸ್ಬುಕ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು. ಕರ್ನಾಟಕದಲ್ಲಿ ದರೋಡೆ ನಡೆದಿರುವುದರಿಂದ ಅಲ್ಲಿಯೇ ದೂರು ದಾಖಲಿಸುವುದಾಗಿಯೂ ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು.
2025ರ ಅಕ್ಟೋಬರ್ 25ರಂದು ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ ಎರಡು ಕಂಟೇನರ್ಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿದೆ ಎಂದು ನಾಸಿಕ್ ಮೂಲದ ಸಂದೀಪ್ ದತ್ತಾ ಪಾಟೀಲ್ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದರು. ದರೋಡೆಯಾದ ಹಣದಲ್ಲಿ ರದ್ದುಗೊಂಡ 2,000 ರೂ. ಮುಖಬೆಲೆಯ ನೋಟುಗಳು ಸೇರಿದ್ದವು ಎನ್ನಲಾಗಿದೆ. ಈ ಹಣವು ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸವಲಾ ಸೇಠ್ ಅವರಿಗೆ ಸೇರಿದ್ದುದಾಗಿ ದೂರುದಾರರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ಬಂಧನದೊಂದಿಗೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸತ್ಯಾಂಶಗಳು ಬಹಿರಂಗವಾಗುವ ನಿರೀಕ್ಷೆಯಿದೆ. ತನಿಖಾಧಿಕಾರಿಗಳು ಎಲ್ಲ ಆಯಾಮಗಳಿಂದಲೂ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ಎಸ್ಐಟಿ ಮೂಲಗಳು ಮಾಹಿತಿ ನೀಡಿವೆ.
In a major development in the ₹400 crore robbery case reported from the Chorla Ghat area near the Maharashtra–Karnataka border, police have arrested a key accused, Kishor Salve, a businessman from Nashik. Kishor Salve reportedly surrendered at the Ghoti Police Station in Nashik district, following which he was taken into custody by the police. With his arrest, the total number of accused arrested in the case has risen to eight.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am