ಬ್ರೇಕಿಂಗ್ ನ್ಯೂಸ್
03-02-26 11:31 am Mangalore Correspondent ಕ್ರೈಂ
ಪುತ್ತೂರು, ಫೆ.3: ಪೋಲೆಂಡ್ ದೇಶದಲ್ಲಿ ಉದ್ಯೋಗ ವೀಸಾ ತೆಗೆಸಿ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಕಡಬ ಮೂಲದ ದಂಪತಿ 4.50 ಲಕ್ಷ ರೂ. ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬದ ನಿವಾಸಿ ಮನೋಜ್ ಆರ್ಥಿಕ ಸಮಸ್ಯೆಗಳಿಂದಾಗಿ ವಿದೇಶದಲ್ಲಿ ಉದ್ಯೋಗಕ್ಕಾಗಿ ಹುಡುಕಾಟದಲ್ಲಿದ್ದರು. ಜನವರಿ 2023ರ ವೇಳೆ ಪೋಲೆಂಡ್ ದೇಶದಲ್ಲಿ ಕೆಲಸದ ಇದೆ ಎಂದು ಹೇಳಿ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮದ ಪರಂಬಿಲ್ ಜೋಸೆಫ್ ಮನೋಜ್ ಹಾಗೂ ಅವರ ಪತ್ನಿ ಸ್ಮಿತಾ ಮನೋಜ್ ಎಂಬವರ ನಂಬಿಸಿದ್ದಾರೆ. ಆರೋಪಿಗಳು ತಮಗೆ ಪೋಲೆಂಡ್ ದೇಶದಲ್ಲಿ ಉತ್ತಮ ಸಂಪರ್ಕ ಇದ್ದು, ಕೆಲಸ ಕೊಡಿಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಅಲ್ಲದೆ ವೀಸಾಗೆ ಸುಮಾರು 5 ಲಕ್ಷ ಹಣ ಖರ್ಚಾಗುತ್ತದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಮಾತನ್ನು ನಂಬಿದ ಮನೋಜ್ ಹಂತ ಹಂತವಾಗಿ ಆರೋಪಿಗಳ ಬ್ಯಾಂಕ್ ಖಾತೆಗೆ 3.50 ಲಕ್ಷ ಹಣವನ್ನು ಹಾಕಿದ್ದು, ಅಲ್ಲದೆ ಸ್ಮಿತಾ ಮನೋಜ್ 1 ಲಕ್ಷ ಹಣವನ್ನು ನಗದಾಗಿ ಸ್ವೀಕರಿಸಿದ್ದರು. ಈ ನಡುವೆ 09-01-2024 ರಂದು ಮನೋಜ್ ವೀಸಾ ಸಂದರ್ಶನಕ್ಕೆ ಮುಂಬೈಗೆ ತೆರಳಿದಾಗ, ತಮ್ಮ ವೀಸಾಕ್ಕೆ ಯಾವುದೇ ಅರ್ಜಿಯೇ ಸಲ್ಲಿಸಿಲ್ಲ ಎಂಬುದು ತಿಳಿದುಬಂದಿತ್ತು.
ಹಣ ಪಡೆದಿದ್ದ ದಂಪತಿಯನ್ನು ಸಂಪರ್ಕಿಸಿದಾಗ, ಅವರು ಗೊಂದಲದ ಉತ್ತರ ನೀಡಿದ್ದಾರೆ. ಅಲ್ಲದೆ, ಹಣವನ್ನು 2025ರ ಡಿಸೆಂಬರ್ ಕೊನೆಯ ವಾರದಲ್ಲಿ ವಾಪಸು ಕೊಡುತ್ತೇವೆ ಎಂದಿದ್ದರು. ಆದರೆ, ಸಮಯ ಮೀರಿದರೂ ಹಣ ವಾಪಸು ನೀಡಿಲ್ಲ.
2026ರ ಜನವರಿ ಎರಡನೇ ವಾರದಲ್ಲಿ ಮತ್ತೆ ಸಂಪರ್ಕಿಸಲು ಯತ್ನಿಸಿದಾಗ, ಪರಂಬಲ್ ಜೋಸೆಫ್ ಮನೋಜ್ ಸಂಪರ್ಕಕ್ಕೆ ಸಿಗದೇ ಇದ್ದು, ಸ್ಮಿತಾ ಮನೋಜ್ ಹಣ ನೀಡುವುದನ್ನು ನಿರಾಕರಿಸಿ, “ಹಣ ಕೇಳಿದರೆ ಮಾನಹಾನಿ ಮೊಕದ್ದಮೆ ದಾಖಲಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ. ಇದೀಗ ವಿದೇಶದಲ್ಲಿ ಉದ್ಯೋಗ ಕಲ್ಪಿಸುವುದಾಗಿ ಹಣ ಪಡೆದ ವಂಚನೆ ಮಾಡಿದ ಆರೋಪಿಗಳ ವಿರುದ್ದ ಕ್ರಮಕ್ಕೆ ಮನೋಜ್ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A couple from Kadaba has been booked for allegedly cheating a man of ₹4.5 lakh by promising a job visa to Poland. The victim later discovered that no visa application had been filed. After failing to return the money and allegedly issuing threats, a complaint was registered at the Kadaba Police Station.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm