ಬ್ರೇಕಿಂಗ್ ನ್ಯೂಸ್
07-02-26 05:21 pm Bangalore Correspondent ಕ್ರೈಂ
ಬೆಂಗಳೂರು, ಫೆ.7 : ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಪಹರಣ, ಕಳ್ಳತನ ಅಥವಾ ದೌರ್ಜನ್ಯದ ಪ್ರಕರಣಗಳು ಕೇಳಿಬರುವ ನಗರದಲ್ಲಿ ಈ ಬಾರಿ ‘ಗರ್ಭಿಣಿ ಬೆಕ್ಕಿನ’ ಅಪಹರಣ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಎಚ್.ಎ.ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ‘ವ್ಯಾನ್ಶಿ ಸಾಲೇಟೇರ್’ ಅಪಾರ್ಟ್ಮೆಂಟ್ ಆವರಣದಲ್ಲಿ ಇದ್ದ ಗರ್ಭಿಣಿ ಬೆಕ್ಕೊಂದನ್ನು ಅಕ್ರಮವಾಗಿ ಹಿಡಿದು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪದಡಿ ಬರೋಬ್ಬರಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಾಣಿಪ್ರಿಯ ಹರೀಶ್ ಎಂಬವರು ಈ ಸಂಬಂಧ ಎಚ್.ಎ.ಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಪಾರ್ಟ್ಮೆಂಟ್ ಆವರಣದಲ್ಲಿ ವಾಸಿಸುತ್ತಿದ್ದ ಮೂಕ ಪ್ರಾಣಿಯನ್ನು ಅನುಮತಿ ಇಲ್ಲದೆ ಹಿಡಿದು ಸಾಗಿಸಿರುವುದು ಕಾನೂನುಬಾಹಿರ ಎಂದು ಅವರು ಆಕ್ಷೇಪಿಸಿದ್ದಾರೆ. ದೂರಿನನ್ವಯ ಅಪಾರ್ಟ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀರಾಮ್, ಸೆಕ್ಯುರಿಟಿ ಮ್ಯಾನೇಜರ್ ಹಾಗೂ ಇತರ ಸಿಬ್ಬಂದಿ ಸೇರಿ ಒಟ್ಟು 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ.
ಪ್ರಕರಣವನ್ನು ಪೊಲೀಸರು ‘ಪ್ರಾಣಿ ದೌರ್ಜನ್ಯ ತಡೆ ಕಾಯ್ದೆ’ ಅಡಿ ದಾಖಲಿಸಿದ್ದು, ಗರ್ಭಿಣಿ ಬೆಕ್ಕನ್ನು ಯಾವ ಉದ್ದೇಶಕ್ಕೆ ಮತ್ತು ಎಲ್ಲಿ ಸ್ಥಳಾಂತರಿಸಲಾಗಿದೆ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am