ಬ್ರೇಕಿಂಗ್ ನ್ಯೂಸ್
09-02-26 11:26 am Mangalore Correspondent ಕ್ರೈಂ
ಮಂಗಳೂರು, ಫೆ.9 : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ.
ಮಾರುತಿ ಓಮ್ನಿ ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಸ್ಕೂಟರ್ ನಲ್ಲಿ ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಡ್ಡಗಟ್ಟಿ ಕಾರಿನ ಒಳಗೆಳೆದು ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ. 16 ವರ್ಷದ ಬಾಲಕಿ ಕಾಶಿಬೆಟ್ಟು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಸುಮಾರು 8:30ಕ್ಕೆ ಸ್ಕೂಟರ್ ಇಟ್ಟು ಸಂತೆಕಟ್ಟೆಯಲ್ಲಿ ಬಸ್ ಹತ್ತಲು ತೆರಳುವಾಗ ಕಾರಿನಲ್ಲಿ ಬಂದವರು ತಡೆದು ನಿಲ್ಲಿಸಿದ್ದಾರೆ.
ಕಾರಿನ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ್ದು ಅದರಲ್ಲಿ ಮೂವರು ದುಷ್ಕರ್ಮಿಗಳು ಕೂಡ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರೆಂದು ತಿಳಿದುಬಂದಿದೆ. ಬಾಲಕಿಯನ್ನು ಕಾರಿನ ಒಳಗೆ ಎಳೆಯಲು ಯತ್ನಿಸಿದಾಗ, ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ, ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿ ದುಷ್ಕರ್ಮಿಗಳು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಯುವತಿಯ ಕೈಗೆ ಮತ್ತು ಬೆರಳಿಗೆ ಚೂರಿಯಿಂದ ಚುಚ್ಚಿದ ಗಾಯವಾಗಿದ್ದು ಕಾಲೇಜು ಬ್ಯಾಗ್ ನೊಂದಿಗೆ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
A 16-year-old college student narrowly escaped a kidnap attempt in Belthangady after three unidentified men in a car tried to force her inside. The girl resisted and raised an alarm, prompting the accused to flee. She sustained minor injuries and is undergoing treatment, while police have launched an investigation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am