ಬ್ರೇಕಿಂಗ್ ನ್ಯೂಸ್
13-02-26 11:52 am HK News Desk ಕ್ರೈಂ
ನವದೆಹಲಿ, ಫೆ.12: ಡಿಜಿಟಲ್ ವಂಚನೆ ಪ್ರಕರಣಗಳು ಜಗತ್ತಿನಾದ್ಯಂತ ಹೆಚ್ಚುತ್ತಿರುವಾಗಲೇ ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆಯನ್ನು ತೆರೆದು ಅದರ ಮೂಲಕವೇ ಸೈಬರ್ ವಂಚನಾ ಜಾಲ ನಡೆಸುತ್ತಿದ್ದುದನ್ನು ತನಿಖಾ ತಂಡ ಪತ್ತೆಹಚ್ಚಿದೆ.
ವಿಯೆಟ್ನಾಂ ಗಡಿಗೆ ಹೊಂದಿಕೊಂಡಿರುವ ಕಾಂಪೊಟ್ ಪ್ರಾಂತ್ಯದಲ್ಲಿ 'ಡಿಜಿಟಲ್ ಅರೆಸ್ಟ್' ಸೇರಿ ವಿವಿಧ ಬಗೆಯ ವಂಚನೆ ಚಟುವಟಿಕೆ ನಡೆಸುತ್ತಿದ್ದ ಖತರ್ನಾಕ್ ಜಾಲವನ್ನು ವಿಯೆಟ್ನಾಂ ಪೊಲೀಸ್ ಪಡೆ ಪತ್ತೆ ಮಾಡಿದೆ. ಅಂತಾರಾಷ್ಟ್ರೀಯ ವಂಚನೆಗಳಿಗೆ ತಡೆ ಹಾಕಲು ಕಾಂಬೋಡಿಯಾ ಪೊಲೀಸರು ಇತ್ತೀಚೆಗೆ ಭಾರಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 190 ಸ್ಕ್ಯಾಮ್ ಸೆಂಟರ್ಗಳನ್ನು ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ. 173 ಅಧಿಕಾರಿ ಸೋಗಿನಲ್ಲಿದ್ದ ಸೈಬರ್ ವಂಚಕರನ್ನೂ ಬಂಧಿಸಲಾಗಿದೆ. ಈ ಸೆಂಟರ್ಗಳನ್ನು ಭಾರತೀಯ ಪೊಲೀಸ್ ಠಾಣೆಯೆಂದು ಬಿಂಬಿಸಿ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಭಾರತೀಯರೇ ಟಾರ್ಗೆಟ್ !
ಸೈಬರ್ ಜಾಲದ ಸೂತ್ರಧಾರಿ ಚೀನಾ ಮೂಲದ ಕಿಂಗ್ ಪಿನ್ ಲೀ ಕುಯಾಂಗ್ ಎಂದು ಶಂಕಿಸಲಾಗಿದೆ. ನಕಲಿ ಪೊಲೀಸ್ ಠಾಣೆಯು ಸಿನಿಮಾ ಸೆಟ್ ರೀತಿಯಿದ್ದು ಪಾಳುಬಿದ್ದ ಕಟ್ಟಡ, ಕಾಂಪೌಂಡ್ನಲ್ಲಿ ತಾತ್ಕಾಲಿಕ ಎನ್ನುವಂತೆ ನಿರ್ಮಿಸಲಾಗಿದೆ. ಇದರಲ್ಲಿ ಮುಂಬಯಿ ಪೊಲೀಸ್ ಹಾಗೂ ಸಿಬಿಐ ಲೋಗೊಗಳಿರುವ ನಕಲಿ ಸೈನ್ ಬೋರ್ಡ್ ಗಳಿವೆ. ಎರಡೂ ಬದಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಅಳವಡಿಸಲಾಗಿದೆ. ವಿದೇಶಗಳಲ್ಲಿರುವ ಭಾರತೀಯರನ್ನು 'ಡಿಜಿಟಲ್ ಅರೆಸ್ಟ್' ಹೆಸರಲ್ಲಿ ವಂಚಿಸುವ ಜಾಲ ಇದಾಗಿದೆ ಎಂದು ವಿಯೆಟ್ನಾಂ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸರು ನೇಪಾಳದಲ್ಲಿದ್ದುಕೊಂಡು ಸೈಬರ್ ವಂಚನೆ ನಡೆಸುತ್ತಿದ್ದ ಜಾಲವನ್ನು ಭೇದಿಸಿದ್ದರು. ಈ ವೇಳೆ, ಇವರಿಗೆ ಕಾಂಬೋಡಿಯಾದಲ್ಲಿ ನೆಟ್ವರ್ಕ್ ಇರೋದು, ಹಣವನ್ನು ಯುಎಸ್ ಡಾಲರಿಗೆ ಪರಿವರ್ತಿಸುವ ಜಾಲ ಇರುವುದು ತಿಳಿದುಬಂದಿತ್ತು. ಮಲೇಶಿಯಾ, ಥಾಯ್ಲೆಂಡಿಗೆ ಉದ್ಯೋಗಕ್ಕೆ ತೆರಳುವ ಭಾರತೀಯರನ್ನೇ ಬಳಸಿಕೊಂಡು ಸೈಬರ್ ವಂಚನಾ ಜಾಲ ನಡೆಸುತ್ತಿರುವುದೂ ಪತ್ತೆಯಾಗಿತ್ತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm