ಬ್ರೇಕಿಂಗ್ ನ್ಯೂಸ್
14-02-26 10:47 pm HK Staffer ಕ್ರೈಂ
ನವದೆಹಲಿ, ಫೆ.14: ಪ್ರೇಮಿಗಳ ದಿನಾಚರಣೆ ದಿನವೇ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 39ರಲ್ಲಿ ಪಾರ್ಕ್ ಮಾಡಿದ್ದ ಟಾಟಾ ಅಲ್ಟ್ರೋಜ್ ಕಾರಿನಲ್ಲಿ ಪ್ರೇಮಿಗಳಾದ ಸುಮಿತ್ ಹಾಗೂ ರೇಖಾ ಎಂಬಿಬ್ಬರ ಶವಗಳು ಪತ್ತೆಯಾಗಿವೆ. ತಮ್ಮ ಕೊನೆಯ ಕ್ಷಣಗಳನ್ನು ಈ ಜೋಡಿ ಇದೇ ಕಾರಿನಲ್ಲಿ ಕಳೆದಿದ್ದಾರೆ. ಸುಮಿತ್ ಹಾಗೂ ರೇಖಾ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದರ ನಡುವೆ, ರೇಖಾಗೆ ಮನೆಯಲ್ಲಿ ಬೇರೆ ವರನನ್ನು ನೋಡಿದ್ದು, ಮದುವೆಗೆ ಮುಂದಾಗಿದ್ದರು. ಈ ವಿಷಯ ತಿಳಿದ ಸುಮಿತ್ ಕೊನೆಯದಾಗಿ ಭೇಟಿಯಾಗುವುದಾಗಿ ಹೇಳಿ ರೇಖಾಳ ಕರೆದಿದ್ದು, ಕಾರಿನಲ್ಲಿ ಕೂರಿಸಿಕೊಂಡು ಸೆಕ್ಟರ್ 39ರ ಬಳಿ ಬಂದಿದ್ದಾನೆ. ಬಳಿಕ ರಿವಾಲ್ವರ್ ತೆಗೆದು ಮೊದಲು ರೇಖಾ ಹಣೆಗೆ ಗುಂಡಿಕ್ಕಿದ್ದರೆ, ಬಳಿಕ ತನ್ನ ತಲೆಗೆ ಗುಂಡಿಕ್ಕಿ ದುರಂತ ಅಂತ್ಯ ಕಂಡಿದ್ದಾರೆ
ಸುಮಿತ್ ಕಳುಗಿಸಿದ ಮೆಸೇಜ್ನಲ್ಲಿ ಪ್ರೀತಿ, ಮದುವೆ ವಿಚಾರ ಹೇಳಿಕೊಂಡಿದ್ದ. ನನ್ನ ನಿರ್ಧಾರಕ್ಕೆ ರೇಖಾ ಕಾರಣ. ಕಳೆದ 15 ವರ್ಷದಿಂದ ನಾವು ಪ್ರೀತಿಸುತ್ತಿದ್ದೇವೆ. ಇದೀಗ ಆಕೆ ಬೇರೆಯೊಬ್ಬನ ಮದುವೆಯಾಗುತ್ತಿದ್ದಾಳೆ. ನನಗೆ ಮೋಸ ಮಾಡಿದ್ದಾಳೆ. ಇದು ನನಗೆ ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಬದುಕು ಅಂತ್ಯಗೊಳಿಸುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದಾನೆ.
ಶುಕ್ರವಾರ ರೇಖಾಳ ಜೊತೆ ತೆರಳಿದ್ದು ಇಬ್ಬರೂ ಮನೆಗೆ ಮರಳಿಲ್ಲ. ಗಾಬರಿಗೊಂಡ ಎರಡೂ ಮನೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಟವರ್ ಲೋಕೇಶನ್ ಪತ್ತೆಹಚ್ಚಿ ಹುಡುಕಿದಾಗ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಒಳಗಿನಿಂದ ಲಾಕ್ ಮಾಡಿಕೊಂಡು ಇಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಮೇಲ್ನೋಟಕ್ಕೆ ಪ್ರೀತಿ ವಿಚಾರದಲ್ಲಿ ಬದುಕು ಅಂತ್ಯಗೊಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
A young couple was found dead inside a parked car in Sector 39 of Noida on Valentine’s Day, in a suspected case of murder-suicide, police said. The deceased have been identified as Sumit and Rekha, who were reportedly in a relationship for several years. Their bodies were discovered inside a Tata Altroz car that was locked from the inside.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am