ಬ್ರೇಕಿಂಗ್ ನ್ಯೂಸ್
14-02-26 10:47 pm HK Staffer ಕ್ರೈಂ
ನವದೆಹಲಿ, ಫೆ.14: ಪ್ರೇಮಿಗಳ ದಿನಾಚರಣೆ ದಿನವೇ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 39ರಲ್ಲಿ ಪಾರ್ಕ್ ಮಾಡಿದ್ದ ಟಾಟಾ ಅಲ್ಟ್ರೋಜ್ ಕಾರಿನಲ್ಲಿ ಪ್ರೇಮಿಗಳಾದ ಸುಮಿತ್ ಹಾಗೂ ರೇಖಾ ಎಂಬಿಬ್ಬರ ಶವಗಳು ಪತ್ತೆಯಾಗಿವೆ. ತಮ್ಮ ಕೊನೆಯ ಕ್ಷಣಗಳನ್ನು ಈ ಜೋಡಿ ಇದೇ ಕಾರಿನಲ್ಲಿ ಕಳೆದಿದ್ದಾರೆ. ಸುಮಿತ್ ಹಾಗೂ ರೇಖಾ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದರ ನಡುವೆ, ರೇಖಾಗೆ ಮನೆಯಲ್ಲಿ ಬೇರೆ ವರನನ್ನು ನೋಡಿದ್ದು, ಮದುವೆಗೆ ಮುಂದಾಗಿದ್ದರು. ಈ ವಿಷಯ ತಿಳಿದ ಸುಮಿತ್ ಕೊನೆಯದಾಗಿ ಭೇಟಿಯಾಗುವುದಾಗಿ ಹೇಳಿ ರೇಖಾಳ ಕರೆದಿದ್ದು, ಕಾರಿನಲ್ಲಿ ಕೂರಿಸಿಕೊಂಡು ಸೆಕ್ಟರ್ 39ರ ಬಳಿ ಬಂದಿದ್ದಾನೆ. ಬಳಿಕ ರಿವಾಲ್ವರ್ ತೆಗೆದು ಮೊದಲು ರೇಖಾ ಹಣೆಗೆ ಗುಂಡಿಕ್ಕಿದ್ದರೆ, ಬಳಿಕ ತನ್ನ ತಲೆಗೆ ಗುಂಡಿಕ್ಕಿ ದುರಂತ ಅಂತ್ಯ ಕಂಡಿದ್ದಾರೆ
ಸುಮಿತ್ ಕಳುಗಿಸಿದ ಮೆಸೇಜ್ನಲ್ಲಿ ಪ್ರೀತಿ, ಮದುವೆ ವಿಚಾರ ಹೇಳಿಕೊಂಡಿದ್ದ. ನನ್ನ ನಿರ್ಧಾರಕ್ಕೆ ರೇಖಾ ಕಾರಣ. ಕಳೆದ 15 ವರ್ಷದಿಂದ ನಾವು ಪ್ರೀತಿಸುತ್ತಿದ್ದೇವೆ. ಇದೀಗ ಆಕೆ ಬೇರೆಯೊಬ್ಬನ ಮದುವೆಯಾಗುತ್ತಿದ್ದಾಳೆ. ನನಗೆ ಮೋಸ ಮಾಡಿದ್ದಾಳೆ. ಇದು ನನಗೆ ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಬದುಕು ಅಂತ್ಯಗೊಳಿಸುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದಾನೆ.
ಶುಕ್ರವಾರ ರೇಖಾಳ ಜೊತೆ ತೆರಳಿದ್ದು ಇಬ್ಬರೂ ಮನೆಗೆ ಮರಳಿಲ್ಲ. ಗಾಬರಿಗೊಂಡ ಎರಡೂ ಮನೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಟವರ್ ಲೋಕೇಶನ್ ಪತ್ತೆಹಚ್ಚಿ ಹುಡುಕಿದಾಗ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಒಳಗಿನಿಂದ ಲಾಕ್ ಮಾಡಿಕೊಂಡು ಇಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಮೇಲ್ನೋಟಕ್ಕೆ ಪ್ರೀತಿ ವಿಚಾರದಲ್ಲಿ ಬದುಕು ಅಂತ್ಯಗೊಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
A young couple was found dead inside a parked car in Sector 39 of Noida on Valentine’s Day, in a suspected case of murder-suicide, police said. The deceased have been identified as Sumit and Rekha, who were reportedly in a relationship for several years. Their bodies were discovered inside a Tata Altroz car that was locked from the inside.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm